September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

ಉಜಿರೆ : “ಸಮ್ಯಕ್ ಭಾಷಾ ಸಂಸ್ಕೃತ ಭಾಷಾ, ಎಲ್ಲಾ ಭಾಷೆಗಳೂ ಸಂಸ್ಕೃತಮಯವಾಗಿದೆ. ಸಂಸ್ಕೃತ ಇರದ ಕ್ಷೇತ್ರವಿಲ್ಲ” ಎಂದು ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕರಾದ ಡಾ. ಪ್ರಸನ್ನ ಕುಮಾರ್ ಐತಾಳ್ ಇವರು ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ‘ಆತ್ಮಾನಂ ಸಂಸ್ಕೃತಂ ಮನ್ಯೆ’ ಎಂಬ ಶೀರ್ಷಿಕೆಯಡಿಯಲ್ಲಿ ಆಯೋಜಿಸಲಾಗಿದ್ದ ‘ಸಂಸ್ಕೃತೋತ್ಸವ’ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ಸಂಸ್ಕೃತ ಜಯ ಘೋಷಣೆಗಳೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಸಮೂಹ ಗಾಯನ ಹಾಗೂ ವಿಶ್ವ ಸಂಸ್ಕೃತ ದಿನದ ಮಹತ್ವದ ಕುರಿತು ಭಾಷಣ ಆಯೋಜಿಸಲಾಗಿತ್ತು.

ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿನಿಯರಾದ ಶಶಾಂಕ್ ಮತ್ತು ಸಹನ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿ ಸುಜನಾ ವಾಲ್ತಾಜೆ ಸ್ವಾಗತಿಸಿ, ವಿದ್ಯಾರ್ಥಿ ಕ್ರಿಸ್ಟಿ ವಂದಿಸಿದರು.

Related posts

ಗೇರುಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಇಂದು(ಡಿ.2) ಉಜಿರೆ ರಥಬೀದಿಯಲ್ಲಿ “ಯಕ್ಷ ಸಂಭ್ರಮ-2023”

Suddi Udaya

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆ ಮತ್ತು ಶಿಕ್ಷಣ ಕಾರ್ಯಾಗಾರ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ

Suddi Udaya
error: Content is protected !!