22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

ವೇಣೂರು: ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ ದಿನಾಚರಣೆಯ ಧ್ವಜಾರೋಹಣವನ್ನು ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಪ್ರವೀಣ್ ಆಚಾರ್ಯ ನೆರವೇರಿಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರಂಬೋಡಿ ಗ್ರಾ.ಪಂ. ಅಧ್ಯಕ್ಷ ಪ್ರವೀಣ್ ಚಂದ್ರ ಜೈನ್ ಜಂತೋಡಿಗುತ್ತು ವಹಿಸಿದ್ದರು. ವೇದಿಕೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ತೇಜಸ್ವಿನಿ, ವೇಣೂರು ಗ್ರಾ.ಪಂ. ಸದಸ್ಯರಾದ ದಿನೇಶ್ ಪೂಜಾರಿ, ಯುವ ಸೇವಾ ಸಂಗಮ ಸೇವಾಟ್ರಸ್ಟ್(ರಿ) ವೇಣೂರು ಇದರ ಅಧ್ಯಕ್ಷ ವಿಜಯ ಗೌಡ, ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಅಧ್ಯಕ್ಷ ರಮೇಶ್ ಪೂಜಾರಿ ಪಡ್ಡಾಯಿ ಮಜಲು ಉಪಸ್ಥಿತರಿದ್ದರು.

ರೂ.18,000 ವೆಚ್ಚದಲ್ಲಿ ಶಾಲಾ ಎದುರು ಟೈಲ್ಸ್ ಅಳವಡಿಸಿದ ಶ್ರೀ ಕ್ಷೇ.ಧ.ಗ್ರಾ.ಯೋ. ಗುಂಡೂರಿ ಸೇವಾಪ್ರತಿನಿಧಿ ಹರೀಶ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಯುವ ಸೇವಾ ಸಂಗಮ ಸೇವಾ ಟ್ರಸ್ಟ್ (ರಿ)ವೇಣೂರು ಇವರು ಶಾಲಾ ಮಕ್ಕಳಿಗೆ ಉಚಿತ ಐಡಿ, ಬೆಲ್ಟ್ ನೀಡಿದರು ಹಾಗೂ ಶಾಲಾ ವಠಾರದಲ್ಲಿ ವಿವಿಧ ಬಗೆಯ ಫಲ ವಸ್ತುಗಳ ಗಿಡಗಳನ್ನು ನೆಟ್ಟು ವನಮಹೋತ್ಸವ ಆಚರಿಸಿದರು. ಶಾಲಾಮುಖ್ಯ ಶಿಕ್ಷಕಿ ಶ್ರೀಮತಿ ಶೖಲಜಾ ಸ್ವಾಗತಿಸಿದರು. ಸಹ ಶಿಕ್ಷಕಿ ದಿಶಾಂತ ನಿರೂಪಿಸಿದರು.

Related posts

ಮಿತ್ತಬಾಗಿಲು ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಸೋಣಂದೂರು: ಜಿಲ್ಲಾ ಮಟ್ಟದ ಪುರುಷರ 55 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿಯಲ್ಲಿ ಅನ್ವೇಷಣ ನೂತನ ಸಂಸ್ಥೆ ಶುಭಾರಂಭ

Suddi Udaya

ಗುರುವಾಯನಕೆರೆ ಗೆಳೆಯರ ಬಳಗದಿಂದ 78ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಕ್ರೀಡೋತ್ಸವ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಪ್ರೀತ್ ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!