23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯದಲ್ಲಿ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಇಲಾಖೆ ದಾಳಿ : ಹಿಟಾಚಿ, ಟಿಪ್ಪರ್, ಟಾಕ್ಟರ್ ವಶಕ್ಕೆ

ನೆರಿಯ : ಪಟ್ಟಾ ಜಾಗದಲ್ಲಿ ಕೃಷಿ ಉದ್ದೇಶದಿಂದ ಅನುಮತಿ ಪಡೆದು ನದಿ ಪರಂಬೋಕು ಸೇರಿದಂತೆ ಸರಕಾರಿ ಜಾಮೀನಿನಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಇಲಾಖೆ ಅಧಿಕಾರಿ ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನೆರಿಯ ಗ್ರಾಮದ ನೆಕ್ಕರೆ ನಿವಾಸಿ ಬೋಬನ್ ಎಂಬವರ ಪಟ್ಟಾ ಜಾಗದಲ್ಲಿ ಕೃಷಿ ಉದ್ದೇಶದಿಂದ ಕಲ್ಲು ಗಣಿಗಾರಿಕೆಗೆ ಪರವಾನಿಗೆ ಪಡೆದು ನದಿಯ ಪರಂಬೋಕು ಜಾಗದಲ್ಲಿ ಮುಂಡಾಜೆ ನಿವಾಸಿ ಜಾನ್ ಎಂಬವರ ಮಗ ಪವನ್ ಎಂಬಾತ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆ.18 ಕ್ಕೆ ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವಸುಧಾ ನೇತೃತ್ವದಲ್ಲಿ ಬೆಳ್ತಂಗಡಿ ಕಂದಾಯ ಇಲಾಖೆ ಮತ್ತು ಭೂಮಾಫನ ಹಾಗೂ ಧರ್ಮಸ್ಥಳ ಪೊಲೀಸರ ಸರಕಾರದಲ್ಲಿ ದಾಳಿ ಮಾಡಿದ್ದಾರೆ.

ದಾಳಿ ವೇಳೆ ಕಲ್ಲು ಗಣಿಗಾರಿಕೆಗೆ ಉಪಯೋಗಿಸುತ್ತಿದ್ದ ಎರಡು ಹಿಟಾಚಿ , ಒಂದು ಟಿಪ್ಪರ್ , ಒಂದು ಟಾಕ್ಟರ್ ವಶಕ್ಕೆ ಪಡೆದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಆರಂಭ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಗುರುವಾಯನಕೆರೆ: ಸ್ಕೂಟಿ- ಬೈಕ್ ಮುಖಾಮುಖಿ ಡಿಕ್ಕಿ,ಸವಾರರಿಬ್ಬರಿಗೆ ಗಂಭೀರ ಗಾಯ,ಆಸ್ಪತ್ರೆಗೆ ದಾಖಲು

Suddi Udaya

ಪದ್ಮುಂಜ ದಾಮೋದರ ನಾಯ್ಕ್ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಹಬ್ಬ: ಬೆಳ್ತಂಗಡಿ ಸಂಭ್ರಮ ಸಂಪನ್ನ,

Suddi Udaya

ಅಳದಂಗಡಿಯಲ್ಲಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya

ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

Suddi Udaya
error: Content is protected !!