July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ನಾರಾವಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ನಾರಾವಿ ವಲಯದ ಮರೋಡಿ ಗ್ರಾಮದಲ್ಲಿ ಯೋಜನೆಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಸಭಾ ಕಾರ್ಯಕ್ರಮ ನಡೆಯಿತು.

ಇದರ ಅಧ್ಯಕ್ಷ ಸ್ಥಾನವನ್ನು ಶ್ರೀ ಕೃಷ್ಣ ಜನ್ಮಾಷ್ಟಮಿ ಅಧ್ಯಕ್ಷ ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣನ್ ವಹಿಸಿದ್ದರು. ಭರತ್ ಕುಮಾರ್ ಜೈನ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು .

ವೇದಿಕೆಯಲ್ಲಿ ಕೇಂದ್ರ ಒಕ್ಕೂಟದ ಅಧ್ಯಕ್ಷ ಸದಾನಂದ ಬಂಗೇರ, ನಾರಾವಿ ವಲಯದ ಮೇಲ್ವಿಚಾರಕಿ ವಿಶಾಲ. ಕೆ, ಮರೋಡಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಶಿವಲಿಂಗಪ್ಪ ಗಾಣಿಗ, ಮರೋಡಿ ಎ ಒಕ್ಕೂಟದ ಅಧ್ಯಕ್ಷ ರಾಜು ಪೂಜಾರಿ, ಬಿ ಒಕ್ಕೂಟದ ಅಧ್ಯಕ್ಷ ರಾಜು ಪೂಜಾರಿ, ಮರೋಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶುಭರಾಜ್ ಹೆಗ್ಡೆ, ಮರೋಡಿ ಗ್ರಾಮ ಪಂಚಾಯತ್ ಸದಸ್ಯರಾದ ಉಮೇಶ್ ಸಾಲ್ಯಾನ್ , ಮರೋಡಿ ವಿಭಾಗದ ಸೇವಾ ಪ್ರತಿನಿಧಿಗಳು ಮರೋಡಿ ಎ ಮತ್ತು ಬಿ ಒಕ್ಕೂಟದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು, ಮರೋಡಿ ಗ್ರಾಮದ ಮಾಜಿ ಪಂಚಾಯತ್ ಸದಸ್ಯರುಗಳು, ಕ್ರೀಡಾಭಿಮಾನಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಸೇವಾಪ್ರತಿನಿಧಿ ಶಶಿಕಲಾ ಸ್ವಾಗತಿಸಿ, ನಾರಾವಿ ವಲಯದ ಮಾಜಿ ವಲಯಾಧ್ಯಕ್ಷ ಯಶೋಧರ ಬಂಗೇರ ನಿರೂಪಿಸಿದರು. ಸೇವಾಪ್ರತಿನಿಧಿ ಹರಿಣಾಕ್ಷಿ ಧನ್ಯವಾದವಿತ್ತರು.

Related posts

ಧರ್ಮಸ್ಥಳ: ನೀರಚಿಲುಮೆ ಬಸ್ ಸ್ಟ್ಯಾಂಡಿನ ಬಳಿ ಹೆದ್ದಾರಿ ಬದಿಯಲ್ಲಿ ಕುಸಿದ ರಸ್ತೆ

Suddi Udaya

ಬಳಂಜ:ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಸಂಭ್ರಮ

Suddi Udaya

ಜೀವ ಬೆದರಿಕೆ ಆರೋಪ : ಕೆ.ಎನ್ ಗೌಡರಿಂದ ಠಾಣೆಗೆ ದೂರು

Suddi Udaya

ಗ್ರಾ.ಪಂ. ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಬಗ್ಗೆ ಮಾರ್ಚ್ 1ರಿಂದ ರಾಜ್ಯಾದ್ಯಂತ ಪ್ರತಿಭಟನೆ: ಸಾರ್ವಜನಿಕ ಮಹತ್ವದ ವಿಚಾರದ ಬಗ್ಗೆ ವಿಧಾನಸಭೆ ಸಭಾಪತಿಯವರಿಗೆ ಪತ್ರ

Suddi Udaya

“ಬೆಳ್ತಂಗಡಿ ಮೊಬೈಲ್ ಅಸೋಸಿಯೇಷನ್ ವತಿಯಿಂದ ಲಕ್ಕಿ ಕೂಪನ್ ಡ್ರಾ

Suddi Udaya

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

Suddi Udaya
error: Content is protected !!