22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಪ್ರತಿಭಾ ವೇದಿಕೆ, ರೋವರ್ಸ್-ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಮತ್ತು ಸಾಂಸ್ಕೃತಿಕ ವೇದಿಕೆ ಇವುಗಳ ಸಹಯೋಗದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

ಬೆಳ್ತಂಗಡಿ :ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಪ್ರತಿಭಾ ವೇದಿಕೆ, ರೋವರ್ಸ್-ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಮತ್ತು ಸಾಂಸ್ಕೃತಿಕ ವೇದಿಕೆ ಇವುಗಳ ಸಹಯೋಗದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ರೊನಾಲ್ಡ್ ಪ್ರವೀಣ್ ಕೊರಯ ಇವರು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ತುಳುನಾಡಿನಲ್ಲಿ ಆಟಿ ತಿಂಗಳಿನಲ್ಲಿ ಮಾಡುವ ವಿವಿಧ ಆಹಾರ ಪದಾರ್ಥಗಳ ಪ್ರದರ್ಶನ, ಆಟಿಯಲ್ಲಿ ಆಡುವಂತಹ ಆಟಗಳು ಮತ್ತು ತುಳುನಾಡಿನ ಆಟಿ ತಿಂಗಳ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ವಿವಿಧ ರೀತಿಯ ಪ್ರದರ್ಶನವನ್ನು ಕಾಲೇಜಿನ ವಿದ್ಯಾರ್ಥಿಗಳು ಏರ್ಪಡಿಸಿದ್ದರು. ಈ ಸಂದರ್ಭದಲ್ಲಿ ವಿವಿಧ ತರಗತಿಗಳಿಗೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು . ನಿರ್ವಹಣಾ ಶಾಸ್ತ್ರದ ಮುಖ್ಯಸ್ಥರಾದ ಪ್ರೊ. ರಶ್ಮಿ ಇವರು ಆಟಿ ತಿಂಗಳ ವಿಶೇಷತೆ ಮತ್ತು ಆ ತಿಂಗಳಲ್ಲಿ ಉಪಯೋಗಿಸುವ ಆಹಾರ ಪದಾರ್ಥಗಳ ಹಿಂದೆ ಇರುವ ವೈಜ್ಞಾನಿಕತೆ ಬಗ್ಗೆ ಸವಿವರವಾಗಿ ತಿಳಿಸಿದರು. ಐಕ್ಯೂ ಎಸಿ ಸಂಚಾಲಕರಾದ ಡಾ.ಕುಶಾಲಪ್ಪ ಎಸ್ ಇವರು ತುಳುನಾಡಿನ ಆಟಿ ಸಂಸ್ಕೃತಿಯ ಬಗ್ಗೆ ತಿಳಿಸಿದರು. ಯುವ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ರೋವರ್ ಸ್ಕೌಟ್ ಲೀಡರ್ ಡಾ. ರವಿ ಎಂ. ಎನ್. ಹಾಗೂ ರೇಂಜರ್ ಲೀಡರ್ ಡಾ. ರಾಜೇಶ್ವರಿ ಎಚ್. ಎಸ್. ಕಾರ್ಯಕ್ರಮದ ಆಯೋಜನೆಯನ್ನು ಮಾಡಿದರು. ವೇದಿಕೆಯಲ್ಲಿ ಗ್ರಂಥಪಾಲಕರಾದ ಶ್ರೀಯುತ ಜಗದೀಶ್ ಎಸ್ ಹಾಗೂ ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಪ್ರೊ. ಮಾರುತಿ ಜಿ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದ ತೀರ್ಪುಗಾರರಾಗಿ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಧಾಕೃಷ್ಣ ಹೆಚ್. ಬಿ., ಶ್ರೀಯುತ ಜಗದೀಶ್ ಎಸ್., ಪ್ರೊ. ರಶ್ಮಿ ಎಚ್., ಶ್ರೀ ಸುರೇಶ್ ಡಿ ಮತ್ತು ಶ್ರೀಮತಿ ವಿಜಯಲಕ್ಷ್ಮಿ ರಾವ್ ಇವರು ಭಾಗವಹಿಸಿದ್ದರು. ಅಂತಿಮ ಬಿಕಾಂನ ಕೌಶಿಕ್ ಶೆಟ್ಟಿ ಸ್ವಾಗತಿಸಿ ಶುಭವತಿ ಇವರು ಕಾರ್ಯಕ್ರಮ ನಿರ್ವಹಿಸಿದರು.

Related posts

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಪದಗ್ರಹಣ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷೆಗಾಗಿ ಸೀಯಾಳ ಅಭಿಷೇಕ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ: ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕಕಲಶ, ಧ್ವಜಾರೋಹಣ

Suddi Udaya

ಕೋಲ್ಕತ್ತಾದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮೌನ ಆಚರಣೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya
error: Content is protected !!