25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸರಗಳ್ಳತನದ ಆರೋಪಿಯನ್ನು ಬಂಧಿಸಿ, ರೂ 5,05,000 ಮೌಲ್ಯದ ಸೊತ್ತನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

ಬೆಳ್ತಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ, ಪಡುಬೆಟ್ಟು ಎಂಬಲ್ಲಿ ಜೂ.04 ರಂದು ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು, ಬೈಕಿನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಎಳೆದು ಬಲವಂತವಾಗಿ ಕಸಿದುಕೊಂಡು ಹೋದ ಘಟನೆಗೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಪೊಲೀಸ್ ಠಾಣಾ ಅಕ್ರ 48-2025 ಕಲಂ 309(4)ಬಿ ಎನ್ ಎಸ್ ಅಡಿ ಪ್ರಕರಣ ದಾಖಲಾಗಿರುತ್ತದೆ.

ಉಪ್ಪಿನಂಗಡಿ ಠಾಣಾ ಪೊಲೀಸರು ಈ ಬಗ್ಗೆ ತನಿಖೆ ನಡೆಸಲಾಗಿ ಆರೋಪಿ ಸುಳ್ಯ, ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ (31) ಎಂಬಾತನನ್ನು ಪುತ್ತೂರು, ನೆಕ್ಕಿಲಾಡಿ ಎಂಬಲ್ಲಿಂದ ದಸ್ತಗಿರಿ ಮಾಡಿ, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿರುತ್ತದೆ.

ಆರೋಪಿತನಿಂದ ಅಂದಾಜು ರೂ 4,54,000/-ಮೌಲ್ಯದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ಪಲ್ಸರ್ ಬೈಕ್ ಸೇರಿದಂತೆ, ಒಟ್ಟು 5,05,000 ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದ್ದು, ಸದ್ರಿ ಬೈಕ್ ಗೆ ಸಂಬಂಧಿಸಿ ಮೈಸೂರು ನಗರದ ವಿಜಯ ನಗರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ದಾಖಲಾಗಿರುತ್ತದೆ.

ಆರೋಪಿ ಪತ್ತೆಕಾರ್ಯದಲ್ಲಿ, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಅರುಣ್ ನಾಗೇಗೌಡರವರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾದ ರವಿ ಬಿ.ಎಸ್ ರವರ ನೇತೃತ್ವದಲ್ಲಿ, ಉಪ್ಪಿನಂಗಡಿ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಕಾರ್ಯಚರಣೆ ನಡೆಸಿರುತ್ತದೆ.

Related posts

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

Suddi Udaya

ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

Suddi Udaya

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಕನ್ಯಾಡಿ ಶ್ರೀಗಳಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ: ಕನ್ಯಾಡಿ ಶ್ರೀರಾಮ‌ಕ್ಷೇತ್ರದ ಅಯೋಧ್ಯೆ ಶಾಖಾಮಠ ಆಶ್ರಮ ನಿರ್ಮಾಣದ ಬಗ್ಗೆ ವಿಚಾರ ವಿಮರ್ಶೆ

Suddi Udaya

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya
error: Content is protected !!