23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಒಂದು ದಿನದ ಪುನಃಶ್ಚೇತನ ತರಬೇತಿ ಶಿಬಿರ

ಉಜಿರೆ: ಸ್ಕೌಟ್ಸ್ ಮತ್ತು ಗೈಡ್ಸ್ ಯಾವತ್ತೂ ನಿಸ್ವಾರ್ಥ ಸೇವೆಗೆ ಹೆಸರುವಾಸಿ. ಯಾವುದೇ ಫಲಾಪೇಕ್ಷೆ ಇಲ್ಲದೇ ಕೇವಲ ಸೇವೆಯೆ ತನ್ನ ಮಾನದಂಡ ಎಂಬಂತೆ ಜೀವನವನ್ನು ಸಮಾಜಕ್ಕಾಗಿ ಸದಾ ಮುಡುಪಾಗಿಸಿಕೊಂಡಿರುವ ಸೇವಾ ಸಂಸ್ಥೆ.ಇಂತಹ ಸೇವಾ ಸಂಸ್ಥೆಯಲ್ಲಿ ತಮ್ಮನ್ನು ತಾವು ಸದಾ ತೊಡಗಿಸಿಕೊಂಡಾಗ ಮಾತ್ರ ರೋವರ್‌ ಮತ್ತು ರೇಂಜರ್ಸ್‌ ವಿದ್ಯಾರ್ಥಿಗಳು ನಿಜವಾಗಿ ಸ್ಕೌಟ್ಸ್ ಮತ್ತು ಗೈಡ್ಸ್ ಗೆ ನೀಡುವ ಗೌರವವಾಗಿದೆ ಎಂದು ಪುತ್ತೂರಿನ ಸೇಂಟ್‌ ಫಿಲೋಮಿನಾ ಕಾಲೇಜಿನ, ರೋವರ್ ಸ್ಕೌಟ್‌ ಲೀಡರ್‌ ಚಂದ್ರಾಕ್ಷ ಹೇಳಿದರು.

ಅವರು ಉಜಿರೆಯ ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜಿನ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಆಯೋಜಿಸಿದ್ದ ಒಂದು ದಿನದ ಪುನಃಶ್ಚೇತನ ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ನಿಪುಣ ಪರೀಕ್ಷೆಯ ಪೂರ್ವ ತಯಾರಿಯಾಗಿ ಒಂದು ದಿನದ ಈ ತರಬೇತಿಯನ್ನು ಹಮ್ಮಿಕೊಳ್ಳಲಾಗಿತ್ತು.ನಿಪುಣ ಪರೀಕ್ಷೆಯಲ್ಲಿ ಮುಖ್ಯವಾಗಿ ಬೇಕಾದ ಸ್ಕೌಟ್‌ ಮತ್ತು ಗೈಡ್ಸ್ ನ ಇತಿಹಾಸ, ಪ್ರಥಮ ಚಿಕಿತ್ಸೆ, ಕಟ್ಟುಗಳು ಮತ್ತು ಗಂಟುಗಳ ಬಗ್ಗೆ ಸಂಪೂರ್ಣ ತರಬೇತಿ ನೀಡಲಾಯಿತು.

ಸಮಾರೋಪ ಸಮಾರಂಭದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಉಪ ಪ್ರಾಚಾರ್ಯರಾದ ಡಾ.ರಾಜೇಶ ಬಿ ಮಾತನಾಡಿ ಅತ್ಯಂತ ಉಪಯುಕ್ತಕರವಾಗಿ ನಡೆದ ಈ ತರಬೇತಿಯನ್ನು ಎಲ್ಲಾ ವಿದ್ಯಾರ್ಥಿಗಳು ಕಲಿತು ಬಿಡದೇ ಅದನ್ನು ನಿತ್ಯ ನಿರಂತರ ಅಭ್ಯಸಿಸಿ ಸದೃಢ ಸಂಪೂರ್ಣ ಆತ್ಮ ವಿಶ್ವಾಸದಿಂದ ಪರೀಕ್ಷೆಗೆ ಹಾಜರಾಗಿ ಯಶಸ್ಸನ್ನು ನಿಮ್ಮದಾಗಿಸಿಕೊಳ್ಳಿ ಎಂದು ನುಡಿದು ಶುಭ ಹಾರೈಸಿದರು.


ಕಾಲೇಜಿನ ರೋವರ್ ಸ್ಕೌಟ್‌ ಲೀಡರ್‌ ಲಕ್ಷ್ಮೀಶ ಭಟ್‌ ಕಾರ್ಯಕ್ರಮ ನಿರ್ವಹಿಸಿದರೆ ರೇಂಜರ್‌ ಲೀಡರ್‌ ಅಂಕಿತಾ ಎಂ ಕೆ ಧನ್ಯವಾದ ಸಮರ್ಪಿಸಿದರು.

Related posts

ಬೆಳ್ತಂಗಡಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ಗಳ ಬೇಸಿಗೆ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ : ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ. ಜಯಂತ್ ಹಾಗೂ ಎಂ.ಡಿ ಸಮೀರ್ ವಿರುದ್ಧ ತನಿಖೆ ಕೋರಿ ಕೋರ್ಟ್ ಗೆ ಅರ್ಜಿ

Suddi Udaya

ಡಿ.16: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರಕ್ತದಾನ ಶಿಬಿರ

Suddi Udaya
error: Content is protected !!