25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ವೇದಿಕೆ ಜಿಲ್ಲಾ ಅಧ್ಯಕ್ಷರಾಗಿ ವಿಂಧ್ಯಾ ಎಸ್.ರೈ ಮತ್ತು ಉಪಾಧ್ಯಕ್ಷರಾಗಿ ಅನಿತಾ ಶೆಟ್ಟಿ ಆಯ್ಕೆ

ಬೆಳ್ತಂಗಡಿ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಇದರ ಮಹಾಸಭೆ ಆ.17 ರಂದು ಮೂಡಬಿದ್ರೆ ಸಮಾಜ ಮಂದಿರದಲ್ಲಿ ನಡೆಯಿತು.


ಸಭೆಯ ಅಧ್ಯಕ್ಷತೆಯನ್ನು ಆಮಂತ್ರಣ ಪರಿವಾರದ ಜಿಲ್ಲಾಧ್ಯಕ್ಷೆ ನಿರೀಕ್ಷಿತಾ ಮಂಗಳೂರು ವಹಿಸಿದ್ದರು.
ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಮಾತಾನಾಡಿ ಒಂದು ವರ್ಷದ ಕಾರ‍್ಯಕ್ರಮ ಪ್ರಗತಿ ಮತ್ತು ಎಲ್ಲಾ ಪದಾಧಿಕಾರಿಗಳ ಸರ್ವ ರೀತಿಯ ಸಹಕಾರವನ್ನು ನೆನೆದು ಅಭಿನಂದನೆ ಸಲ್ಲಿಸಿದರು.


ಮಂಗಳೂರು ಜಿಲ್ಲೆ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಇದರ ನೂತನ ಅಧ್ಯಕ್ಷರಾಗಿ ಅನುಭವಿ ಸಾಹಿತಿಗಳು ಮತ್ತು ಸಂಪನ್ಮೂಲ ವ್ಯಕ್ತಿ ವಿಂಧ್ಯಾ ಎಸ್ ರೈ ಕಡೇಶಿವಾಲಯ ಮತ್ತು ನೂತನ ಉಪಾಧ್ಯಕ್ಷರಾಗಿ ಉಪನ್ಯಾಸಕಿ ಹಾಗೂ ಸಾಹಿತಿ ಅನಿತಾ ಶೆಟ್ಟಿ ಮೂಡಬಿದ್ರೆ ಆಯ್ಕೆಯಾಗಿದ್ದಾರೆ.

ಸಭೆಯಲ್ಲಿ ರಾಜ್ಯ ಪ್ರತಿನಿಧಿಗಳಾದ ಹೆಚ್.ಕೆ. ನಯನಾಡು, ಆಶಾ ಅಡೂರು, ಭಾರತಿ ಪರ್ಕಳ, ಜಿಲ್ಲಾ ನಿರ್ದೇಶಕರಾದ ಚೇತನ್ ಕುಮಾರ್ ಅಮೈ, ಬೆಳ್ತಂಗಡಿ ತಾಲೂಕು ಅಧ್ಯಕ್ಷೆ ವಿದ್ಯಾಶ್ರೀ ಅಡೂರು, ಬಂಟ್ವಾಳ ತಾಲೂಕು ಅಧ್ಯಕ್ಷೆ ರಶ್ಮಿತಾ ಸುರೇಶ್ ಜೋಗಿಬೆಟ್ಟು, ಮೂಡಬಿದ್ರೆ ತಾಲೂಕು ಅಧ್ಯಕ್ಷೆ ಕವಿತಾ ದಿನೇಶ್ ಕಟೀಲ್, ಕಾರ್ಯದರ್ಶಿ ಸುಶ್ಮಿತಾ ಆರ್, ಲೋಲಾಕ್ಷಿ ಶೆಟ್ಟಿ, ಪ್ರಕಾಶ್ ಆಚಾರ್ಯ, ಬಂಟ್ವಾಳ ಘಟಕದ ರೂಪೇಶ್ ಕುಮಾರ್, ರಾಕೇಶ್ ಪೊಳಲಿ, ಪ್ರಸಾದ್ ನಾಯಕ್ ಕಾರ್ಕಳ, ವಿಜಯಚಂದ್ರ ಮುಂಡ್ಲಿ, ಅನ್ನಪೂರ್ಣ ಶ್ಯಾನುಭೋಗ್ ಅಂಬಲಪಾಡಿ, ಅಕ್ಷತಾ ಅಡೂರು, ಸರೀನ್ ತಾಜ್ ಕಾಶಿಪಟ್ಣ, ದೀಕ್ಷಾ ಕಾಶಿಪಟ್ಣ
ಭಾಗವಹಿಸಿದ್ದರು.

Related posts

ಜಿಲ್ಲಾ ಮಹಿಳಾ ಮೋರ್ಚಾದ ತಂಡವು ಬೆಳ್ತಂಗಡಿ ಬಿಜೆಪಿ ಕಚೇರಿಗೆ ಭೇಟಿ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 10 ದಿನಗಳ ಉಚಿತ ‘ಆಹಾರ ಸಂಸ್ಕರಣಾ ಉದ್ಯಮಿ’ ತರಬೇತಿ: ಅರ್ಜಿ ಆಹ್ವಾನ

Suddi Udaya

ಶಿಶಿಲ ಗ್ರಾ.ಪಂ. ವತಿಯಿಂದ ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ನಿಡ್ಲೆ : ಕಾಟ್ಲಾ ನಿವಾಸಿ ಅನ್ನಪೂರ್ಣ ಜೋಶಿ ನಿಧನ

Suddi Udaya

ಗೇರುಕಟ್ಟೆ: ಬಿಜೆಪಿ ಬೃಹತ್ ಪ್ರಚಾರ ಸಭೆ

Suddi Udaya

ಕರಳು ಬೇನೆ /ಕಾಲರಾ ಬಗ್ಗೆ ಎಚ್ಚರ ವಹಿಸುವಂತೆ ಬೆಳ್ತಂಗಡಿ ತಾ.ಪಂ. ನಿಂದ ಸಾರ್ವಜನಿಕರಲ್ಲಿ ವಿನಂತಿ

Suddi Udaya
error: Content is protected !!