September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

ವೇಣೂರು: ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ ದಿನಾಚರಣೆಯ ಧ್ವಜಾರೋಹಣವನ್ನು ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಪ್ರವೀಣ್ ಆಚಾರ್ಯ ನೆರವೇರಿಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರಂಬೋಡಿ ಗ್ರಾ.ಪಂ. ಅಧ್ಯಕ್ಷ ಪ್ರವೀಣ್ ಚಂದ್ರ ಜೈನ್ ಜಂತೋಡಿಗುತ್ತು ವಹಿಸಿದ್ದರು. ವೇದಿಕೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ತೇಜಸ್ವಿನಿ, ವೇಣೂರು ಗ್ರಾ.ಪಂ. ಸದಸ್ಯರಾದ ದಿನೇಶ್ ಪೂಜಾರಿ, ಯುವ ಸೇವಾ ಸಂಗಮ ಸೇವಾಟ್ರಸ್ಟ್(ರಿ) ವೇಣೂರು ಇದರ ಅಧ್ಯಕ್ಷ ವಿಜಯ ಗೌಡ, ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಅಧ್ಯಕ್ಷ ರಮೇಶ್ ಪೂಜಾರಿ ಪಡ್ಡಾಯಿ ಮಜಲು ಉಪಸ್ಥಿತರಿದ್ದರು.

ರೂ.18,000 ವೆಚ್ಚದಲ್ಲಿ ಶಾಲಾ ಎದುರು ಟೈಲ್ಸ್ ಅಳವಡಿಸಿದ ಶ್ರೀ ಕ್ಷೇ.ಧ.ಗ್ರಾ.ಯೋ. ಗುಂಡೂರಿ ಸೇವಾಪ್ರತಿನಿಧಿ ಹರೀಶ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಯುವ ಸೇವಾ ಸಂಗಮ ಸೇವಾ ಟ್ರಸ್ಟ್ (ರಿ)ವೇಣೂರು ಇವರು ಶಾಲಾ ಮಕ್ಕಳಿಗೆ ಉಚಿತ ಐಡಿ, ಬೆಲ್ಟ್ ನೀಡಿದರು ಹಾಗೂ ಶಾಲಾ ವಠಾರದಲ್ಲಿ ವಿವಿಧ ಬಗೆಯ ಫಲ ವಸ್ತುಗಳ ಗಿಡಗಳನ್ನು ನೆಟ್ಟು ವನಮಹೋತ್ಸವ ಆಚರಿಸಿದರು. ಶಾಲಾಮುಖ್ಯ ಶಿಕ್ಷಕಿ ಶ್ರೀಮತಿ ಶೖಲಜಾ ಸ್ವಾಗತಿಸಿದರು. ಸಹ ಶಿಕ್ಷಕಿ ದಿಶಾಂತ ನಿರೂಪಿಸಿದರು.

Related posts

ಎಸ್‌.ಐ.ಟಿ ಕಾರ್ಯಾಚರಣೆಯ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ: ವಕೀಲ ಮಂಜುನಾಥ ಎನ್. ರವರ ವಿರುದ್ಧ ದೂರು ದಾಖಲು

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಉದ್ಘಾಟನೆ; ನಂಬಿಕೆ, ಪರಂಪರೆಯ ಶ್ರೇಷ್ಠ ಸ್ವರ್ಣೋದ್ಯಮ ಸಂಸ್ಥೆ ಮುಳಿಯ: ಸಂಪತ್ ಬಿ. ಸುವರ್ಣ; 50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ಅಡಿಕೆ ಎಲೆಚುಕ್ಕಿ ರೋಗ: ರೈತರಿಗೆ ಸಹಾಯಧನ ನೀಡಲು ಶಿಫಾರಸ್ಸು ಅರ್ಜಿ ಸಲ್ಲಿಕೆಗೆ ಸೂಚನೆ

Suddi Udaya

ಉಜಿರೆಯ ಶ್ರೀ ಧ.ಮಂ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಸಮಾರೋಪ ಸಮಾರಂಭ

Suddi Udaya

ಬಿ.ಜೆ.ಪಿ ಅಭ್ಯರ್ಥಿ ಭಾರೀ ಮುನ್ನಡೆಯಿಂದ ಗೆಲುವಿನ ಜಯಭೇರಿ ಭಾರಿಸಲಿದ್ದಾರೆ, ಬಿಜೆಪಿ 400ರ ಗಡಿ ದಾಟಲಿದೆ-ಪ್ರಭಾಕರ ಬಂಗೇರ ಪತ್ರಿಕಾಗೋಷ್ಠಿ

Suddi Udaya

ಬಾಸ್ಕೆಟ್‌ಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ

Suddi Udaya
error: Content is protected !!