July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶ್ರೀ ಕ್ಷೇತ್ರ ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 2025 ನೇ ಸಾಲಿನ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ 22ನೇ ರಾಜ್ಯ ಮಟ್ಟದ ಅಂಚೆ-ಕುಂಚ ವಿಜೇತರಿಗೆ ಪುರಸ್ಕಾರ ಸಮಾರಂಭ ಆ.19 ರಂದು ಧರ್ಮಸ್ಥಳ ಮಹೋತ್ಸವ ಸಭಾ ಭವನದಲ್ಲಿ ನಡೆಯಿತು.

ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆಯನ್ನು ವಹಿಸಿದರು. ರಾಜ್ಯ ಪ್ರಶಸ್ತಿ ಪುರಸ್ಕೃತ ಚಲನಚಿತ್ರ ಸಾಹಿತಿಗಳು ನಿರ್ದೇಶಕರು ಡಾ. ವಿ. ನಾಗೇಂದ್ರ ಪ್ರಸಾದ್ ಪುಸ್ತಕಗಳ ಲೋಕಾರ್ಪಣೆಗೊಳಿಸಿದರು. ಕಿರುತೆರೆ ಹಾಗೂ ಚಲನಚಿತ್ರ ನಟ ದತ್ತಣ್ಣ ಶುಭಾಶಂಸನೆ ಮಾಡಿದರು.

ಮುಖ್ಯ ಅತಿಥಿಗಳಾಗಿ ಮಾತೃಶ್ರೀ ಹೇಮಾವತಿ ವೀ.ಹೆಗ್ಗಡೆ, ಡಿ. ಹಷೇ೯ಂದ್ರ ಕುಮಾರ್, ಸುಪ್ರೀಯ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.


ನಂತರ ಸ್ಪರ್ಧಾ ವಿಜೇತರಿಗೆ ಪುರಸ್ಕಾರ, ಕುಂಚ ಗಾನ ನೃತ್ಯ ವೈಭವ ನಡೆಯಿತು. ಸನಾತನ ನಾಟ್ಯಾಲಯ ಮಂಗಳೂರು ಇವರಿಂದ ನೃತ್ಯ ಹಾಗೂ ಚಿತ್ರ ಕಲಾವಿದ ರಮೇಶ್ ಸಸಾನೂರು ಇವರಿಂದ ಕುಂಚ ಕಾಯ೯ಕ್ರಮ ನೇರವೇರಿಸಿದರು.
ವಿದೂಷಿ ಕು. ಸುಪ್ರೀತಾ ಪ್ರಾರ್ಥಿಸಿದರು. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ| ಐ. ಶಶಿಕಾಂತ್ ಜೈನ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳ್ನಾಡಿದರು. ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಾಡಿತ್ತಾಯ ಧನ್ಯವಾದವಿತ್ತರು. ಪುದುವೆಟ್ಟು ಶ್ರೀ ಧ.ಮಂ. ಅನುದಾನಿತ ಹಿ.ಪ್ರಾ, ಶಾಲಾ ಶಿಕ್ಷಕ ನಿಶಾಂತ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೈಲಂಗಡಿ :ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ ಬ್ರಹ್ಮ ಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಧರ್ಮಸ್ಥಳ ಪ್ರಕರಣ : ಸ್ವಾಮೀಜಿಗಳ ನಿಯೋಗದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರ ಭೇಟಿ, ಎನ್ಐಎ ತನಿಖೆಗೆ ವಹಿಸುವಂತೆ ಮನವಿ

Suddi Udaya

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೆ ಷೂ ಎಸೆದ ಪ್ರಕರಣ ತನಿಖೆ ನಡೆಸಿ ಆರೋಪಿಯ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ: ರಕ್ಷಿತ್ ಶಿವರಾಂ

Suddi Udaya

ಅಳದಂಗಡಿ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯಲ್ಲಿ ಭಜನಾ ಪರಿಷತ್ತು ಕಾರ್ಯದರ್ಶಿಯಿಂದ ಅಹವಾಲು ಸ್ವೀಕಾರ

Suddi Udaya
error: Content is protected !!