25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು: ಉಷಾ ಎನ್ ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಉಷಾ ಏನ್ ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ ಆ. 19 ರಂದು ಜರಗಿತು.

ಕಾರ್ಯಕ್ರಮವನ್ನು ಊರ ಪ್ರಮುಖರಾದ ಗಿರೀಶ್ ಬಾರಿತ್ತಾಯ ಪಾರಳ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿ ಫಲಾನುಭವಿ ವಿದ್ಯಾರ್ಥಿಗಳಿಗೆ ನಿಧಿಯನ್ನು ಸಾಂಕೇತಿಕವಾಗಿ ವಿತರಿಸಿದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಶಿಕ್ಷಣ ಸಂಯೋಜಕರಾದ ಎಸ್. ಎನ್ ಕಾಕತ್ಕರ್ ಮಾತನಾಡಿ ಗ್ರಾಮೀಣ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲು ನೀಡಿದ ಈ ದತ್ತಿ ನಿಧಿ ಇತರರಿಗೂ ಪ್ರೇರಕ ಎಂದು ತಿಳಿಸಿದರು. ದತ್ತಿ ನಿಧಿಯಿಂದ ವಿದ್ಯಾರ್ಥಿಗಳ ಬಸ್ ಪಾಸ್ ಶುಲ್ಕ ಮತ್ತು ಶೈಕ್ಷಣಿಕ ಶುಲ್ಕವನ್ನು ನೀಡಲಾಯಿತು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಬೆಳಾಲು ಇದರ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ರಾಜೇಶ್ ಕುರ್ಕಿಲ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶಶಿಧರ , ಶಿಕ್ಷಕ ವೃಂದದವರು ಉಪಸ್ಥಿತರಿದ್ದರು ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಸ್ವಾಗತಿಸಿದರು. ಶಿಕ್ಷಕರಾದ ಕಿರಣ್ ವಂದಿಸಿದರು. ಸುಮನ್ ಯು. ಎಸ್ ಕಾರ್ಯಕ್ರಮ ನಿರೂಪಿಸಿದರು

Related posts

ಬುರುಡೆ ಪ್ರಕರಣ: ಬೆಂಗಳೂರಿನ ಜಯಂತ್ ಟಿ ಬಾಡಿಗೆ ಮನೆ ಮೇಲೆ ಎಸ್.ಐ.ಟಿ ದಾಳಿ

Suddi Udaya

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

Suddi Udaya

ಲಾಯಿಲ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಕೊಡೆ ವಿತರಣೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತಿ ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವ ಪ್ರಾರಂಭ

Suddi Udaya

ಪಡಂಗಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!