25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಹಿರಿಯ ಛಾಯಾಗ್ರಹಕ ಕುಶಾಲಪ್ಪ ರೈ ರವರಿಗೆ ಗೌರವಾರ್ಪಣೆ

ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆಯ ಅoಗವಾಗಿ ಬೆಳ್ತಂಗಡಿ ವಲಯದ ಹಿರಿಯ ಛಾಯಾಗ್ರಹಕರಾದ ಕುಶಾಲಪ್ಪ ರೈ ಬಿoಬ ಸ್ಟುಡಿಯೋ ಪದ್ಮುoಜ ಇವರಿಗೆ ಗೌರವಾರ್ಪಣೆ ಕಾರ್ಯಕ್ರಮ ಆ. 19 ರoದು ಗುರುವಾಯನಕೆರೆ ಛಾಯಾಭವನದಲ್ಲಿ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಲಯದ ಅಧ್ಯಕ್ಷೆ ಸಿಲ್ವಿಯಾ ಬೆಳ್ತಂಗಡಿ ವಹಿಸಿದ್ದರು.

ವೇದಿಕೆಯಲ್ಲಿ ನೂತನ ಅಧ್ಯಕ್ಷ ರವಿ ಪೂಜಾರಿ ನಾರಾವಿ, ವಲಯದ ಜೊತೆ ಕಾರ್ಯದರ್ಶಿ ಶಿವಪ್ರಸಾದ್ ಉಜಿರೆ, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಭಾರದ್ವಾಜ್ ಉಜಿರೆ, ವಲಯದ ಸ್ಥಾಪಕಾ ಅಧ್ಯಕ್ಷ ಪಾಲಾಕ್ಷ ಪಿ ಸುವರ್ಣ, ಗೌರವಾಧ್ಯಕ್ಷ ಜಗದೀಶ್ ಜೈನ್ ಧರ್ಮಸ್ಥಳ ಉಪಸ್ಥಿತರಿದ್ದರು.

ವಿಶ್ವ ಛಾಯಾಗ್ರಹಣ ದಿನಾಚರಣೆ ಬಗ್ಗೆ ವಲಯದ ಮಾಜಿ ಅಧ್ಯಕ್ಷ ಕೆ. ವಸಂತ್ ಶರ್ಮ ಮಾತನಾಡಿದರು. ಸನ್ಮಾನಿತರಾದ ಕುಶಾಲಪ್ಪ ರೈ ಪದ್ಮುಂಜ ಇವರು ಸಂಘಟನೆಯಲ್ಲಿ ನೀಡಿದ ಸಹಕಾರ ಹಿಂದೆ ಛಾಯಾಗ್ರಹಣ ಮಾಡುವ ಸಂದರ್ಭದಲ್ಲಿ ತೊಂದರೆಗಳನ್ನು ಅನುಭವಿಸಿದ ವಿಚಾರಗಳನ್ನು ಪಾಲಾಕ್ಷ ಪಿ ಸುವರ್ಣ ನೆನಪಿಸಿಕೊಂಡರು. ಕಾರ್ಯಕ್ರಮದಲ್ಲಿ ಸಂಘದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಉಮೇಶ್ ಮದ್ದಡ್ಕ ಕಾರ್ಯಕ್ರಮ ನಿರೂಪಿಸಿ, ಗಣೇಶ್ ಹೆಗ್ಡೆ ನಾರಾವಿ ಪ್ರಾರ್ಥನೆಗೈದರು. ಸಿಲ್ವಿಯಾ ಬೆಳ್ತಂಗಡಿ ಸ್ವಾಗತಿಸಿ , ನೂತನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ ಧನ್ಯವಾದವಿತ್ತರು.

Related posts

ಶಿಶಿಲೇಶ್ವರ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಜಯಾನಂದ ಕಲ್ಲಾಪು, ಉಪಾಧ್ಯಕ್ಷರಾಗಿ ಸುನಿಲ್ ಅಣವು

Suddi Udaya

ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ  ವರ್ಷಾವಧಿ ಜಾತ್ರಾ ಮಹೋತ್ಸವ ಆಮಂತ್ರಣ ಬಿಡುಗಡೆ   

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಸುಬ್ರಹ್ಮಣ್ಯ ರಾವ್ ರವರಿಗೆ ಬೀಳ್ಕೂಡುಗೆ ಸಮಾರಂಭ

Suddi Udaya

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

Suddi Udaya
error: Content is protected !!