30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಂಡಾಜೆ ವಲಯದ ಕಲ್ಮಂಜ ಒಕ್ಕೂಟದ ಧಾರಿಣಿ ತಂಡದ ಸದಸ್ಯೆ ಹೇಮಾವತಿ ಅವರ ಪುತ್ರ ದುರ್ಗಾಪ್ರಸಾದ್ ಅವರು ಬೈಕ್ ಅಪಘಾತದಿಂದ ಗಾಯಗೊಂಡು ಮಂಗಳೂರಿನ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆದು ಒಟ್ಟು ರೂ. 4.5 ಲಕ್ಷ ದವರೆಗೆ ಚಿಕಿತ್ಸಾ ವೆಚ್ಚ ಖರ್ಚಾಗಿದ್ದು, ಮುಂದಿನ ಚಿಕಿತ್ಸೆ ಗಾಗಿ ಯೋಜನೆಯಿಂದ ಮಂಜೂರಾದ ರೂ 25000/-ಮೊತ್ತದ ಸಹಾಯ ಧನದ ಚೆಕ್ ಅನ್ನು ಫಲಾನುಭವಿಗೆ ಹಸ್ತಾಂತರಿಸಲಾಯಿತು.

ಗ್ರಾ. ಪಂಚಾಯತ್ ಸದಸ್ಯ ಶ್ರೀಧರ ಮಡಿವಾಳ ಇವರ ಕೈಯಿಂದ ಗಾಯಾಳುವಿನ ತಾಯಿ ಹೇಮಾವತಿರವರ ಇದನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆ ಸದಸ್ಯ ವಸಂತ ಮಡಿವಾಳ, ಒಕ್ಕೂಟದ ಅಧ್ಯಕ್ಷ ಬಿ.ಎನ್ ಹಮೀದ್, ಮುಂಡಾಜೆ ವಲಯದ ಮೇಲ್ವಿಚಾರಕ ಜನಾರ್ಧನ ಮಾಚಾರು, ಕಲ್ಮಂಜ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಜಿಶಾ, ಶೌರ್ಯ ವಿಪತ್ತು ತಂಡದ ಸುಧೀರ್ ಮತ್ತು ಮನೆಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ದೊಂಡೋಲೆ ನಿವಾಸಿ ನಾಗೇಶ್ ಹೃದಯಾಘಾತದಿಂದ ನಿಧನ

Suddi Udaya

ಭಾರತೀಯ ಮಜ್ದೂರ್ ಸಂಘದಿಂದ ಪ್ರತಿಭಟನೆ ಮತ್ತು ಪ್ರಧಾನಮಂತ್ರಿಗೆ ಮನವಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

Suddi Udaya

ಶಿಶಿಲ: ಹಾವು ಕಡಿತ ಪ್ರಕರಣ-ಉಪ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣದ ಚಿಕಿತ್ಸೆಗೆ ಕರುಣಾಕರ ಶಿಶಿಲರಿಂದ ಮನವಿ

Suddi Udaya

ಪಡ್ಡಂದಡ್ಕ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದ ಹರೀಶ್ ಪೂಂಜ

Suddi Udaya
error: Content is protected !!