25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸರಗಳ್ಳತನದ ಆರೋಪಿಯನ್ನು ಬಂಧಿಸಿ, ರೂ 5,05,000 ಮೌಲ್ಯದ ಸೊತ್ತನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

ಬೆಳ್ತಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ, ಪಡುಬೆಟ್ಟು ಎಂಬಲ್ಲಿ ಜೂ.04 ರಂದು ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು, ಬೈಕಿನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಎಳೆದು ಬಲವಂತವಾಗಿ ಕಸಿದುಕೊಂಡು ಹೋದ ಘಟನೆಗೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಪೊಲೀಸ್ ಠಾಣಾ ಅಕ್ರ 48-2025 ಕಲಂ 309(4)ಬಿ ಎನ್ ಎಸ್ ಅಡಿ ಪ್ರಕರಣ ದಾಖಲಾಗಿರುತ್ತದೆ.

ಉಪ್ಪಿನಂಗಡಿ ಠಾಣಾ ಪೊಲೀಸರು ಈ ಬಗ್ಗೆ ತನಿಖೆ ನಡೆಸಲಾಗಿ ಆರೋಪಿ ಸುಳ್ಯ, ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ (31) ಎಂಬಾತನನ್ನು ಪುತ್ತೂರು, ನೆಕ್ಕಿಲಾಡಿ ಎಂಬಲ್ಲಿಂದ ದಸ್ತಗಿರಿ ಮಾಡಿ, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿರುತ್ತದೆ.

ಆರೋಪಿತನಿಂದ ಅಂದಾಜು ರೂ 4,54,000/-ಮೌಲ್ಯದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ಪಲ್ಸರ್ ಬೈಕ್ ಸೇರಿದಂತೆ, ಒಟ್ಟು 5,05,000 ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದ್ದು, ಸದ್ರಿ ಬೈಕ್ ಗೆ ಸಂಬಂಧಿಸಿ ಮೈಸೂರು ನಗರದ ವಿಜಯ ನಗರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ದಾಖಲಾಗಿರುತ್ತದೆ.

ಆರೋಪಿ ಪತ್ತೆಕಾರ್ಯದಲ್ಲಿ, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಅರುಣ್ ನಾಗೇಗೌಡರವರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾದ ರವಿ ಬಿ.ಎಸ್ ರವರ ನೇತೃತ್ವದಲ್ಲಿ, ಉಪ್ಪಿನಂಗಡಿ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಕಾರ್ಯಚರಣೆ ನಡೆಸಿರುತ್ತದೆ.

Related posts

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

Suddi Udaya

ಕುತ್ಲೂರು ಗುರುನಾರಾಯಣ ಸೇವಾ ಸಂಘ ದ ಅಧ್ಯಕ್ಷರಾಗಿ ಕೇಶವ ಪೂಜಾರಿ ಆಯ್ಕೆ

Suddi Udaya

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶ್ರೀಉಮಾಮಹೇಶ್ವರ ದೇವರಿಗೆ ಪಂಚಾಮೃತ ಅಭಿಷೇಕ: ಬ್ರಹ್ಮಕಲಶಾಭಿಷೇಕ

Suddi Udaya
error: Content is protected !!