25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಎಸ್.ಎಲ್.ಸಿ, ಪಿಯುಸಿ ಇದೀಗ ಖಾಸಗಿ ಹಾಗೂ ನೇರ ಪರೀಕ್ಷೆಗೆ ಅನುಗ್ರಹ ಟ್ರೈನಿಂಗ್ ಕಾಲೇಜಿಗೆ ಬಿ.ಐ.ಎಸ್.ಇ ಬೋರ್ಡ್ ಮಾನ್ಯತೆ

ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಬೆಂಗಳೂರಿನ ಭಾರತ್ ಇನ್ಸಿಟ್ಯೂಟ್ ಆಫ್ ಸ್ಕೂಲ್ ಎಜುಕೇಶನ್ ನೊಂದಿಗೆ ಅನುಗ್ರಹ ಟ್ರೈನಿಂಗ್ ಕಾಲೇಜು ಆ.೧೯ ರಂದು ಅಧಿಕೃತ ಕರಾರು ಮಾಡಿಕೊಂಡಿದ್ದು, ಕಾಲೇಜಿಗೆ ಅಧಿಕೃತ ಮಾನ್ಯತೆ ದೊರಕಿದೆ.


ಇದರಿಂದ ದ.ಕ ಜಿಲ್ಲೆಯ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಖಾಸಗಿ ಮತ್ತು ನೇರ ಪರೀಕ್ಷಾ ಕೇಂದ್ರವಾಗಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿಯೇ ಪರೀಕ್ಷೆ ಬರೆಯುವ, ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಫೈಲ್ ಆದ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಹಾಗೂ ಮರು ಪರೀಕ್ಷೆ ಬರೆಯುವ, ಅರ್ಧದಲ್ಲಿ ಬಿಟ್ಟ ವಿದ್ಯಾರ್ಥಿಗಳಿಗೆ, ಫೈಲ್ ಆದ ವಿದ್ಯಾರ್ಥಿಗಳಿಗೆ ನೇರವಾಗಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಗೆ ಹಾಜರಾಗುವ ಅವಕಾಶಗಳು ಸಿಕ್ಕಿವೆ. ಇದೀಗ ಅನುಗ್ರಹ ಟ್ರೆöÊನಿಂಗ್ ಕಾಲೇಜಿನಲ್ಲಿ ವರ್ಷದಲ್ಲಿ ಎರಡು ಬಾರಿ ಪರೀಕ್ಷೆಗಳು ನಡೆಯಲಿದ್ದು, ವಿದ್ಯಾರ್ಥಿಗಳಿಗೆ ವರದಾನವಾಗಲಿದೆ.

ಸಂಸ್ಥೆಯ ಮುಖ್ಯಸ್ಥ ಎಂ ಜಿ ತಲ್ಹತ್ ಮತ್ತು ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರಾದ ಮುಹಮ್ಮದ್ ತೌಸೀಫ್ ಮತ್ತು ಅಬ್ದುಲ್ ಖಾದರ್ ಇದು ಬೆಳ್ತಂಗಡಿ ಹಾಗೂ ಜಿಲ್ಲೆಯ ಶಿಕ್ಷಣ ವಲಯಕ್ಕೆ ಹೊಸ ಚರಿತ್ರೆಯ ಆರಂಭ. ಪ್ರತಿಯೊಬ್ಬ ವಿದ್ಯಾರ್ಥಿಗೂ ಎಸ್.ಎಸ್.ಎಲ್.ಸಿ, ಪಿಯುಸಿ ಪೂರೈಸಿ ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ನಮ್ಮ ಸಂಸ್ಥೆ ಎಲ್ಲಾ ರೀತಿಯ ನೆರವು ನೀಡಲು ಸಜ್ಜಾಗಿದೆ. ಈ ಮೂಲಕ, ಶಿಕ್ಷಣದಲ್ಲಿ ಹಿಂದೆ ಬಿದ್ದ ವಿದ್ಯಾರ್ಥಿಗಳು ಮತ್ತೆ ತಮ್ಮ ಜೀವನವನ್ನು ಮರು ಕಟ್ಟಿಕೊಳ್ಳುವ ಅಪೂರ್ವ ಅವಕಾಶ ದೊರೆತಿದೆ ಎಂದಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ: ಸುಮಾರು 65 ಬಗೆಯ ವಿವಿಧ ಖಾದ್ಯಗಳು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ

Suddi Udaya

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

Suddi Udaya

ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!