July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್

ಬೆಳ್ತಂಗಡಿ: ಉಜಿರೆ ಖಾಸಗಿ ಆಸ್ಪತ್ರೆ ಮುಂಭಾಗ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ಇದೀಗ ಹಾಜರಾಗಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಸಂಖ್ಯೆ 76/77/79/2025 ಪ್ರಕರಣದಲ್ಲಿ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಪ್ರಕರಣದಲ್ಲಿ 16 ಮಂದಿ ಆರೋಪಿಗಳಿಗೆ ಆ.20 ರಂದು 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಲಾಗಿತ್ತು.ನೋಟಿಸ್ ಬೆನ್ನಲ್ಲೇ ಆ.20 ರಂದು ಸಂಜೆ 5 ಗಂಟೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣಣವರ್, ವೆಂಕಪ್ಪ ಕೋಟ್ಯಾನ್, ಶ್ರೀನಿವಾಸ್ ಗೌಡ, ಮೋಹನ್ ಶೆಟ್ಟಿ , ತನುಷ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಗಣೇಶ್ ಶೆಟ್ಟಿ, ರಾಜೇಶ್ ಭಟ್ ಸೇರಿದಂತೆ 16 ಮಂದಿಗೆ ಆ.20 ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದರು.ಅವರೆಲ್ಲರೂ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ಹಾಜರಾಗದೆ ಇದ್ದಲ್ಲಿ BNS 35(6) ಅಡಿಯಲ್ಲಿ ಬಂಧಿಸಲಾಗುವುದಾಗಿ ನೋಟಿಸ್ ನಲ್ಲಿ ತಿಳಿಸಲಾಗಿತ್ತು.

ಆಸ್ಪತ್ರೆ ಮುಂಭಾಗ ಅಕ್ರಮ ಕೂಟದಲ್ಲಿ ಸಮೊಟೊ ಪ್ರಕರಣ, ಮಾಧ್ಯಮದ ಮೇಲೆ ಹಲ್ಲೆ ಪ್ರಕರಣ, ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆ ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮೂರು ಪ್ರಕರಣ ದಾಖಲಾಗಿತ್ತು.
ಅದರಂತೆ ಠಾಣೆಗೆ ಹಾಜರಾಗಿ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ಮುಂದೆ ವಿಚಾರಣೆ ಎದುರಿಸುತ್ತಿದ್ದಾರೆ.

Related posts

ದ.ಕ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಬೆಳ್ತಂಗಡಿಯ ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya

ದೊಂಡೋಲೆ ನಾರ್ಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಸತೀಶ್, ಕಾರ್ಯದರ್ಶಿ ದಿವಾಕರ್

Suddi Udaya

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

Suddi Udaya

ಜಾರಿಗೆಬೈಲು ಬದ್ರ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಾಜಿ ಕೆ.ಎಂ ಅಬೂಬಕ್ಕರ್, ಕಾರ್ಯದರ್ಶಿಯಾಗಿ ಹಾರಿಶ್ ಆಯ್ಕೆ

Suddi Udaya

ಮಳೆಯ ರಭಸಕ್ಕೆ ಕಣಿಯಾಗಿ ಮಾರ್ಪಾಡುಗೊಂಡ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಕಾಲುದಾರಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಈ ಕಾಲುದಾರಿಯ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!