25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

ಬೆಳ್ತಂಗಡಿ: ಉಜಿರೆ ಖಾಸಗಿ ಆಸ್ಪತ್ರೆ ಮುಂಭಾಗ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ಇದೀಗ ಹಾಜರಾಗಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಸಂಖ್ಯೆ 76/77/79/2025 ಪ್ರಕರಣದಲ್ಲಿ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಪ್ರಕರಣದಲ್ಲಿ 16 ಮಂದಿ ಆರೋಪಿಗಳಿಗೆ ಆ.20 ರಂದು 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಲಾಗಿತ್ತು.ನೋಟಿಸ್ ಬೆನ್ನಲ್ಲೇ ಆ.20 ರಂದು ಸಂಜೆ 5 ಗಂಟೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣಣವರ್, ವೆಂಕಪ್ಪ ಕೋಟ್ಯಾನ್, ಶ್ರೀನಿವಾಸ್ ಗೌಡ, ಮೋಹನ್ ಶೆಟ್ಟಿ , ತನುಷ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಗಣೇಶ್ ಶೆಟ್ಟಿ, ರಾಜೇಶ್ ಭಟ್ ಸೇರಿದಂತೆ 16 ಮಂದಿಗೆ ಆ.20 ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದರು.ಅವರೆಲ್ಲರೂ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ಹಾಜರಾಗದೆ ಇದ್ದಲ್ಲಿ BNS 35(6) ಅಡಿಯಲ್ಲಿ ಬಂಧಿಸಲಾಗುವುದಾಗಿ ನೋಟಿಸ್ ನಲ್ಲಿ ತಿಳಿಸಲಾಗಿತ್ತು.

ಆಸ್ಪತ್ರೆ ಮುಂಭಾಗ ಅಕ್ರಮ ಕೂಟದಲ್ಲಿ ಸಮೊಟೊ ಪ್ರಕರಣ, ಮಾಧ್ಯಮದ ಮೇಲೆ ಹಲ್ಲೆ ಪ್ರಕರಣ, ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆ ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮೂರು ಪ್ರಕರಣ ದಾಖಲಾಗಿತ್ತು.
ಅದರಂತೆ ಠಾಣೆಗೆ ಹಾಜರಾಗಿ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ಮುಂದೆ ವಿಚಾರಣೆ ಎದುರಿಸುತ್ತಿದ್ದಾರೆ.

Related posts

ಇಂದಬೆಟ್ಟು: ಕರುವಲ್ಲ ಕಲ್ಲಗುಂಡ ದೇವಸ್ಥಾನ ಹಾಗೂ ಬಂಗಾಡಿ ಹಾಡಿ ದೈವಗಳ ಕಾಣಿಕೆ ಡಬ್ಬಿ ಕಳ್ಳತನ

Suddi Udaya

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿಯ ಧರ್ಮದರ್ಶಿ ಹರೀಶ್ ದಂಪತಿಗಳಿಂದ ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಗೊಗ್ರಾಸಕ್ಕಾಗಿ ರೂ.25,000 ದೇಣಿಗೆ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಕಿರು ಧೀಕ್ಷೆ ಸ್ವೀಕಾರ

Suddi Udaya
error: Content is protected !!