22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

ಬೆಳ್ತಂಗಡಿ: ಉಜಿರೆ ಖಾಸಗಿ ಆಸ್ಪತ್ರೆ ಮುಂಭಾಗ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ಇದೀಗ ಹಾಜರಾಗಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಸಂಖ್ಯೆ 76/77/79/2025 ಪ್ರಕರಣದಲ್ಲಿ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಪ್ರಕರಣದಲ್ಲಿ 16 ಮಂದಿ ಆರೋಪಿಗಳಿಗೆ ಆ.20 ರಂದು 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಲಾಗಿತ್ತು.ನೋಟಿಸ್ ಬೆನ್ನಲ್ಲೇ ಆ.20 ರಂದು ಸಂಜೆ 5 ಗಂಟೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣಣವರ್, ವೆಂಕಪ್ಪ ಕೋಟ್ಯಾನ್, ಶ್ರೀನಿವಾಸ್ ಗೌಡ, ಮೋಹನ್ ಶೆಟ್ಟಿ , ತನುಷ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಗಣೇಶ್ ಶೆಟ್ಟಿ, ರಾಜೇಶ್ ಭಟ್ ಸೇರಿದಂತೆ 16 ಮಂದಿಗೆ ಆ.20 ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದರು.ಅವರೆಲ್ಲರೂ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ಹಾಜರಾಗದೆ ಇದ್ದಲ್ಲಿ BNS 35(6) ಅಡಿಯಲ್ಲಿ ಬಂಧಿಸಲಾಗುವುದಾಗಿ ನೋಟಿಸ್ ನಲ್ಲಿ ತಿಳಿಸಲಾಗಿತ್ತು.

ಆಸ್ಪತ್ರೆ ಮುಂಭಾಗ ಅಕ್ರಮ ಕೂಟದಲ್ಲಿ ಸಮೊಟೊ ಪ್ರಕರಣ, ಮಾಧ್ಯಮದ ಮೇಲೆ ಹಲ್ಲೆ ಪ್ರಕರಣ, ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆ ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮೂರು ಪ್ರಕರಣ ದಾಖಲಾಗಿತ್ತು.
ಅದರಂತೆ ಠಾಣೆಗೆ ಹಾಜರಾಗಿ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ಮುಂದೆ ವಿಚಾರಣೆ ಎದುರಿಸುತ್ತಿದ್ದಾರೆ.

Related posts

ವೇಣೂರು: ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ‘ಶಿಕ್ಷಣ ಭೀಷ್ಮ ಪ್ರಶಸ್ತಿ’ಯ ಗರಿ

Suddi Udaya

ಉಜಿರೆ ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

Suddi Udaya

ಉಜಿರೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿ: ಪ್ರಯಾಣಿಕರಿಗೆ ಗಂಭೀರ ಗಾಯ

Suddi Udaya

ಸೌತಡ್ಕದಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ: ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

Suddi Udaya
error: Content is protected !!