22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಗುರುದೇವ ಕಾಲೇಜಿನಲ್ಲಿ ಪ.ಪೂ. ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

ಬೆಳ್ತಂಗಡಿ : ‘ಕ್ರೀಡೆ ಮನಸ್ಸು ಮತ್ತು ದೇಹಕ್ಕೆ ಆರೋಗ್ಯ ನೀಡುವಂತಹುದು. ಶಾಲಾ ಕಾಲೇಜಿನ ಅವಧಿಯಲ್ಲಿ ಸಿಗುವ ಕ್ರೀಡೆಯ ಅವಕಾಶವನ್ನು ಸದ್ಭಳಕೆ ಮಾಡಿಕೊಂಡು ವಿದ್ಯಾರ್ಥಿ ದೆಸೆಯಲ್ಲಿಯೇ ಬದುಕನ್ನು ಬೆಳಗಿಸಿಕೊಳ್ಳಬೇಕು’ ಎಂದು ನಗರ ಪಂಚಾಯಿತಿ ಮುಖ್ಯಾಧಿಕಾರಿ ರಾಜೇಶ್ ಕೆ ಹೇಳಿದರು.


ಅವರು ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಟೇಬಲ್ ಟೆನ್ನಿಸ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.


ತಾಲೂಕು ಕ್ರೀಡಾ ಸಂಯೋಜಕ ಸಂದೀಪ್ ಕುಮಾರ್ ಶೆಟ್ಟಿ ಮಾತನಾಡಿ, ಶ್ರೀ ಗುರುದೇವ ಸಂಸ್ಥೆಯ ಸ್ಥಾಪಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರು ಹೃದಯ ವೈಶಾಲ್ಯತೆ ಉಳ್ಳವರಾಗಿದ್ದು, ಕ್ರೀಡೆಗೆ ಸದಾ ಪ್ರೋತ್ಸಾಹ ನೀಡುತ್ತಾ ಬಂದವರು ಎಂದರು.
ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.


ವೇದಿಕೆಯಲ್ಲಿ ಎಸ್.ಡಿ.ಎಂ. ವಸತಿ ಕಾಲೇಜಿನ ಉಪಪ್ರಾಂಶುಪಾಲ ಮನೀಶ್, ಕ್ರೀಡಾ ನಿರ್ದೇಶಕ ಲಕ್ಷ್ಮಣ ಗೌಡ, ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ, ಕ್ರೀಡಾ ನಿರ್ದೇಶಕ ರವಿರಾಮ್ ಶೆಟ್ಟಿ, ಕ್ರೀಡಾ ಸಂಯೋಜಕಿ ಅನನ್ಯ ಉಪಸ್ಥಿತರಿದ್ದರು.
ಕಾಲೇಜಿನ ಉಪ ಪ್ರಾಂಶುಪಾಲ ಬಿ. ಎ. ಶಮೀವುಲ್ಲಾ ಪ್ರಸ್ತಾವಿಸಿ ಸ್ವಾಗತಿಸಿದರು. ಕನ್ನಡ ಭಾಷಾ ಉಪನ್ಯಾಸಕ ರಾಕೇಶ್ ಕುಮಾರ್ ನಿರೂಪಿಸಿದರು. ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿ ಶುಭಲಕ್ಷ್ಮಿ ವಂದಿಸಿದರು.

Related posts

ದ.ಕ. ಜಿಲ್ಲಾ ಮತ್ತು ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ – ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya
error: Content is protected !!