30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಗುರುದೇವ ಕಾಲೇಜಿನಲ್ಲಿ ಪ.ಪೂ. ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

ಬೆಳ್ತಂಗಡಿ : ‘ಕ್ರೀಡೆ ಮನಸ್ಸು ಮತ್ತು ದೇಹಕ್ಕೆ ಆರೋಗ್ಯ ನೀಡುವಂತಹುದು. ಶಾಲಾ ಕಾಲೇಜಿನ ಅವಧಿಯಲ್ಲಿ ಸಿಗುವ ಕ್ರೀಡೆಯ ಅವಕಾಶವನ್ನು ಸದ್ಭಳಕೆ ಮಾಡಿಕೊಂಡು ವಿದ್ಯಾರ್ಥಿ ದೆಸೆಯಲ್ಲಿಯೇ ಬದುಕನ್ನು ಬೆಳಗಿಸಿಕೊಳ್ಳಬೇಕು’ ಎಂದು ನಗರ ಪಂಚಾಯಿತಿ ಮುಖ್ಯಾಧಿಕಾರಿ ರಾಜೇಶ್ ಕೆ ಹೇಳಿದರು.


ಅವರು ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಟೇಬಲ್ ಟೆನ್ನಿಸ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.


ತಾಲೂಕು ಕ್ರೀಡಾ ಸಂಯೋಜಕ ಸಂದೀಪ್ ಕುಮಾರ್ ಶೆಟ್ಟಿ ಮಾತನಾಡಿ, ಶ್ರೀ ಗುರುದೇವ ಸಂಸ್ಥೆಯ ಸ್ಥಾಪಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರು ಹೃದಯ ವೈಶಾಲ್ಯತೆ ಉಳ್ಳವರಾಗಿದ್ದು, ಕ್ರೀಡೆಗೆ ಸದಾ ಪ್ರೋತ್ಸಾಹ ನೀಡುತ್ತಾ ಬಂದವರು ಎಂದರು.
ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.


ವೇದಿಕೆಯಲ್ಲಿ ಎಸ್.ಡಿ.ಎಂ. ವಸತಿ ಕಾಲೇಜಿನ ಉಪಪ್ರಾಂಶುಪಾಲ ಮನೀಶ್, ಕ್ರೀಡಾ ನಿರ್ದೇಶಕ ಲಕ್ಷ್ಮಣ ಗೌಡ, ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ, ಕ್ರೀಡಾ ನಿರ್ದೇಶಕ ರವಿರಾಮ್ ಶೆಟ್ಟಿ, ಕ್ರೀಡಾ ಸಂಯೋಜಕಿ ಅನನ್ಯ ಉಪಸ್ಥಿತರಿದ್ದರು.
ಕಾಲೇಜಿನ ಉಪ ಪ್ರಾಂಶುಪಾಲ ಬಿ. ಎ. ಶಮೀವುಲ್ಲಾ ಪ್ರಸ್ತಾವಿಸಿ ಸ್ವಾಗತಿಸಿದರು. ಕನ್ನಡ ಭಾಷಾ ಉಪನ್ಯಾಸಕ ರಾಕೇಶ್ ಕುಮಾರ್ ನಿರೂಪಿಸಿದರು. ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿ ಶುಭಲಕ್ಷ್ಮಿ ವಂದಿಸಿದರು.

Related posts

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಶ್ರೀ ಶಾರದಾ ಪೂಜೆ

Suddi Udaya

ವಿಧಾನ ಸಭಾ ಚುನಾವಣೆ : ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ- 2023’ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಮಾಶಾಸನ ಹೆಚ್ಚಳ ಮತ್ತು ಮಹಿಳಾ ದೌರ್ಜನ್ಯ ಖಂಡಿಸಿ ಮನವಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

Suddi Udaya
error: Content is protected !!