September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಎಸ್.ಎಲ್.ಸಿ, ಪಿಯುಸಿ ಇದೀಗ ಖಾಸಗಿ ಹಾಗೂ ನೇರ ಪರೀಕ್ಷೆಗೆ ಅನುಗ್ರಹ ಟ್ರೈನಿಂಗ್ ಕಾಲೇಜಿಗೆ ಬಿ.ಐ.ಎಸ್.ಇ ಬೋರ್ಡ್ ಮಾನ್ಯತೆ

ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಬೆಂಗಳೂರಿನ ಭಾರತ್ ಇನ್ಸಿಟ್ಯೂಟ್ ಆಫ್ ಸ್ಕೂಲ್ ಎಜುಕೇಶನ್ ನೊಂದಿಗೆ ಅನುಗ್ರಹ ಟ್ರೈನಿಂಗ್ ಕಾಲೇಜು ಆ.೧೯ ರಂದು ಅಧಿಕೃತ ಕರಾರು ಮಾಡಿಕೊಂಡಿದ್ದು, ಕಾಲೇಜಿಗೆ ಅಧಿಕೃತ ಮಾನ್ಯತೆ ದೊರಕಿದೆ.


ಇದರಿಂದ ದ.ಕ ಜಿಲ್ಲೆಯ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಖಾಸಗಿ ಮತ್ತು ನೇರ ಪರೀಕ್ಷಾ ಕೇಂದ್ರವಾಗಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿಯೇ ಪರೀಕ್ಷೆ ಬರೆಯುವ, ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಫೈಲ್ ಆದ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಹಾಗೂ ಮರು ಪರೀಕ್ಷೆ ಬರೆಯುವ, ಅರ್ಧದಲ್ಲಿ ಬಿಟ್ಟ ವಿದ್ಯಾರ್ಥಿಗಳಿಗೆ, ಫೈಲ್ ಆದ ವಿದ್ಯಾರ್ಥಿಗಳಿಗೆ ನೇರವಾಗಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಗೆ ಹಾಜರಾಗುವ ಅವಕಾಶಗಳು ಸಿಕ್ಕಿವೆ. ಇದೀಗ ಅನುಗ್ರಹ ಟ್ರೆöÊನಿಂಗ್ ಕಾಲೇಜಿನಲ್ಲಿ ವರ್ಷದಲ್ಲಿ ಎರಡು ಬಾರಿ ಪರೀಕ್ಷೆಗಳು ನಡೆಯಲಿದ್ದು, ವಿದ್ಯಾರ್ಥಿಗಳಿಗೆ ವರದಾನವಾಗಲಿದೆ.

ಸಂಸ್ಥೆಯ ಮುಖ್ಯಸ್ಥ ಎಂ ಜಿ ತಲ್ಹತ್ ಮತ್ತು ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರಾದ ಮುಹಮ್ಮದ್ ತೌಸೀಫ್ ಮತ್ತು ಅಬ್ದುಲ್ ಖಾದರ್ ಇದು ಬೆಳ್ತಂಗಡಿ ಹಾಗೂ ಜಿಲ್ಲೆಯ ಶಿಕ್ಷಣ ವಲಯಕ್ಕೆ ಹೊಸ ಚರಿತ್ರೆಯ ಆರಂಭ. ಪ್ರತಿಯೊಬ್ಬ ವಿದ್ಯಾರ್ಥಿಗೂ ಎಸ್.ಎಸ್.ಎಲ್.ಸಿ, ಪಿಯುಸಿ ಪೂರೈಸಿ ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ನಮ್ಮ ಸಂಸ್ಥೆ ಎಲ್ಲಾ ರೀತಿಯ ನೆರವು ನೀಡಲು ಸಜ್ಜಾಗಿದೆ. ಈ ಮೂಲಕ, ಶಿಕ್ಷಣದಲ್ಲಿ ಹಿಂದೆ ಬಿದ್ದ ವಿದ್ಯಾರ್ಥಿಗಳು ಮತ್ತೆ ತಮ್ಮ ಜೀವನವನ್ನು ಮರು ಕಟ್ಟಿಕೊಳ್ಳುವ ಅಪೂರ್ವ ಅವಕಾಶ ದೊರೆತಿದೆ ಎಂದಿದ್ದಾರೆ.

Related posts

ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಹ್ಮಣ್ಯ ಇದರ ವತಿಯಿಂದ ದಿಶಾ ಎಸ್. ರವರಿಗೆ ಸನ್ಮಾನ.

Suddi Udaya

ಕೆನರಾ ಸ್ಟೀಲ್ ಇಂಡಸ್ಟ್ರೀಸ್‌ನ ಸಂಸ್ಥೆ ಪಣೆಜಾಲುವಿನಲ್ಲಿ ವಿನಯ ಸ್ಟೀಲ್ & ಮೆಟಲ್ಸ್ ಶುಭಾರಂಭ

Suddi Udaya

ಕಡಬದ ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿ, ಗಂಭೀರ ಗಾಯಗೊಂಡ ವ್ಯಕ್ತಿ ಸಾವು: ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪ್ರತಿಭಟನೆ,

Suddi Udaya

ಧರ್ಮಸ್ಥಳದಲ್ಲಿ ಎಸ್.ಡಿ.ಎಮ್. ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಸಮಾವೇಶ

Suddi Udaya
error: Content is protected !!