July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಎಸ್.ಎಲ್.ಸಿ, ಪಿಯುಸಿ ಇದೀಗ ಖಾಸಗಿ ಹಾಗೂ ನೇರ ಪರೀಕ್ಷೆಗೆ ಅನುಗ್ರಹ ಟ್ರೈನಿಂಗ್ ಕಾಲೇಜಿಗೆ ಬಿ.ಐ.ಎಸ್.ಇ ಬೋರ್ಡ್ ಮಾನ್ಯತೆ

ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಬೆಂಗಳೂರಿನ ಭಾರತ್ ಇನ್ಸಿಟ್ಯೂಟ್ ಆಫ್ ಸ್ಕೂಲ್ ಎಜುಕೇಶನ್ ನೊಂದಿಗೆ ಅನುಗ್ರಹ ಟ್ರೈನಿಂಗ್ ಕಾಲೇಜು ಆ.೧೯ ರಂದು ಅಧಿಕೃತ ಕರಾರು ಮಾಡಿಕೊಂಡಿದ್ದು, ಕಾಲೇಜಿಗೆ ಅಧಿಕೃತ ಮಾನ್ಯತೆ ದೊರಕಿದೆ.


ಇದರಿಂದ ದ.ಕ ಜಿಲ್ಲೆಯ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಖಾಸಗಿ ಮತ್ತು ನೇರ ಪರೀಕ್ಷಾ ಕೇಂದ್ರವಾಗಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿಯೇ ಪರೀಕ್ಷೆ ಬರೆಯುವ, ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಫೈಲ್ ಆದ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಹಾಗೂ ಮರು ಪರೀಕ್ಷೆ ಬರೆಯುವ, ಅರ್ಧದಲ್ಲಿ ಬಿಟ್ಟ ವಿದ್ಯಾರ್ಥಿಗಳಿಗೆ, ಫೈಲ್ ಆದ ವಿದ್ಯಾರ್ಥಿಗಳಿಗೆ ನೇರವಾಗಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಗೆ ಹಾಜರಾಗುವ ಅವಕಾಶಗಳು ಸಿಕ್ಕಿವೆ. ಇದೀಗ ಅನುಗ್ರಹ ಟ್ರೆöÊನಿಂಗ್ ಕಾಲೇಜಿನಲ್ಲಿ ವರ್ಷದಲ್ಲಿ ಎರಡು ಬಾರಿ ಪರೀಕ್ಷೆಗಳು ನಡೆಯಲಿದ್ದು, ವಿದ್ಯಾರ್ಥಿಗಳಿಗೆ ವರದಾನವಾಗಲಿದೆ.

ಸಂಸ್ಥೆಯ ಮುಖ್ಯಸ್ಥ ಎಂ ಜಿ ತಲ್ಹತ್ ಮತ್ತು ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರಾದ ಮುಹಮ್ಮದ್ ತೌಸೀಫ್ ಮತ್ತು ಅಬ್ದುಲ್ ಖಾದರ್ ಇದು ಬೆಳ್ತಂಗಡಿ ಹಾಗೂ ಜಿಲ್ಲೆಯ ಶಿಕ್ಷಣ ವಲಯಕ್ಕೆ ಹೊಸ ಚರಿತ್ರೆಯ ಆರಂಭ. ಪ್ರತಿಯೊಬ್ಬ ವಿದ್ಯಾರ್ಥಿಗೂ ಎಸ್.ಎಸ್.ಎಲ್.ಸಿ, ಪಿಯುಸಿ ಪೂರೈಸಿ ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ನಮ್ಮ ಸಂಸ್ಥೆ ಎಲ್ಲಾ ರೀತಿಯ ನೆರವು ನೀಡಲು ಸಜ್ಜಾಗಿದೆ. ಈ ಮೂಲಕ, ಶಿಕ್ಷಣದಲ್ಲಿ ಹಿಂದೆ ಬಿದ್ದ ವಿದ್ಯಾರ್ಥಿಗಳು ಮತ್ತೆ ತಮ್ಮ ಜೀವನವನ್ನು ಮರು ಕಟ್ಟಿಕೊಳ್ಳುವ ಅಪೂರ್ವ ಅವಕಾಶ ದೊರೆತಿದೆ ಎಂದಿದ್ದಾರೆ.

Related posts

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

Suddi Udaya

ತೆಕ್ಕಾರು ವಲಯ ಕಾಂಗ್ರೆಸ್ ಸಮಿತಿ ಸಭೆ

Suddi Udaya

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಅನನ್ಯ ರಾಜ್ಯಕ್ಕೆ ಪ್ರಥಮ

Suddi Udaya

ಆರಂಬೋಡಿ ಗ್ರಾಮ‌ ಪಂಚಾಯತ್ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆ

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಘಟನೆ ಖಂಡಿಸಿ ರಾತ್ರಿ ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಠಾಣೆ ಎದುರು ಪ್ರತಿಭಟನೆ ನಡೆಸಿದಶಾಸಕ ಹರೀಶ್ ಪೂಂಜ

Suddi Udaya
error: Content is protected !!