September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಾಧಕರು

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

ಬೆಳ್ತಂಗಡಿ: ವಿದ್ಯಾದಾನ, ಅನ್ನದಾನ, ಅಕ್ಷರ ದಾಸೋಹ, ಶಿಕ್ಷಣ ಕ್ಷೇತ್ರ ಜೊತೆಗೆ ಸಮಾಜದ ಕಟ್ಟಕಡೆಯ ಕುಟುಂಬಗಳು ನೆಮ್ಮದಿಯಿಂದ ಇರಬೇಕು, ಆರ್ಥಿಕವಾಗಿ ಬಲಿಷ್ಠರಾಗಬೇಕೆಂದು 1982ರಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾರಂಭಿಸಿದ್ದು ಇದರಿಂದಾಗಿ ಲಕ್ಷಾಂತರ ಮಂದಿ ಬೆಳಕನ್ನು ಕಂಡಿದ್ದಾರೆ. ಜೊತೆಗೆ ಕುಡಿಯುವ ನೀರು, ಕೃಷಿ ಗೆ ನೀರು,ಪ್ರಾಣಿ ಸಂಕುಲಗಳಿಗೆ ಬರಡು ಭೂಮಿಯಲ್ಲೂ ನೀರು ಸಿಗಬೇಕು ಎನ್ನುವ ಉದ್ದೇಶದಿಂದ “ನಮ್ಮೂರು ನಮ್ಮ ಕೆರೆ” ಕೆರೆಗಳಿಗೆ ಕಾಯಕಲ್ಪ ಕಾರ್ಯಕ್ರಮಗಳನ್ನು ಹಮ್ಮಿಕೊಂಡು 1000 ಕೆರೆಗಳನ್ನು ಜೀರ್ಣೋದ್ಧಾರಗೊಳಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ” ನೀಡಿ ಗೌರವಿಸಲಾಗುತ್ತಿದೆ.

ಇಂದು( ಆಗಸ್ಟ್‌ 20 )ಮಲೇಷ್ಯಾದಲ್ಲಿ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

ಡಾ.ಹೆಗ್ಗಡೆಯವರು ಸಮಾಜಕ್ಕೆ ಸಲ್ಲಿಸಿದ ಅಮೋಘ ಕೊಡುಗೆಗಾಗಿ,ಈ ಎಲ್ಲಾ ಸೇವೆಗಾಗಿ ರಾಷ್ಟ್ರಪತಿ ಡಾ.ಶಂಕರ್‌ ದಯಾಳ್‌ ಶರ್ಮರಿಂದ ರಾಜಶ್ರೀ ಪ್ರಶಸ್ತಿ, ಮಂಗಳೂರು ವಿ.ವಿ. ಯಿಂದ ಗೌರವ ಡಾಕ್ಟರೇಟ್‌, ಇಂದಿರಾಗಾಂಧಿ ಪ್ರಿಯದರ್ಶಿನಿ ಪ್ರಶಸ್ತಿ, ಮಾಜಿ ಪ್ರಧಾನ ಅಟಲ್‌ ಬಿಹಾರಿ ವಾಜಪೇಯಿಯವರಿಂದ ಫಿಕ್ಕಿ ಪ್ರಶಸ್ತಿ, ಭಾರತ ಸರ್ಕಾರದಿಂದ ಪದ್ಮಭೂಷಣ ಪ್ರಶಸ್ತಿ ಮತ್ತು ಪದ್ಮವಿಭೂಷಣ, 2003 ರಲ್ಲಿ ಕರ್ನಾಟಕ ಸರಕಾರದಿಂದ ಕರ್ನಾಟಕ ಪರವರ್ತನೆಯ ರೂವಾರಿ ಪ್ರಶಸ್ತಿ,ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ರತ್ನ ಪ್ರಶಸ್ತಿ, ಬಸವಶ್ರೀ ಪ್ರಶಸ್ತಿ, ನಾಡೋಜ ಪ್ರಶಸ್ತಿ, 2024 ರಲ್ಲಿ ಕಂಚಿ ಕಾಮಕೋಟಿ ಸಂಸ್ಥಾನದ ಪೀಠಾಧಿಪತಿಗಳಾದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಮಹಾ ಸ್ವಾಮೀಜಿಯವರಿಂದ ಮಲೆನಾಡು ರತ್ನ ಬಿರುದು ಸಹಿತ ಅನೇಕ ಗೌರವಗಳಿಗೆ ಪಾತ್ರರಾಗಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಆಶ್ರಯದಲ್ಲಿ ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಪಿಕ್‌ಆಪ್ ವಾಹನ ತಡೆಗಟ್ಟಿ: ಜೀವಬೆದರಿಕೆ ಒಡ್ಡಿದ ಆರೋಪ: ಮೆಸ್ಕಾಂ ಉದ್ಯೋಗಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕನ್ಯಾಡಿ ಕಾರ್ಯಕ್ಷೇತ್ರದಲ್ಲಿ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ಕಳಿಯ: ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಬಂಗೇರ ಬ್ರಿಗೇಡ್ ಪಡಂಗಡಿ ಪಂಚಾಯತ್ ವ್ಯಾಪ್ತಿಯ ನೂತನ ಸಮಿತಿ ರಚನೆ

Suddi Udaya

ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ

Suddi Udaya
error: Content is protected !!