22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್

ಬೆಳ್ತಂಗಡಿ: ಉಜಿರೆ ಖಾಸಗಿ ಆಸ್ಪತ್ರೆ ಮುಂಭಾಗ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ಇದೀಗ ಹಾಜರಾಗಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಸಂಖ್ಯೆ 76/77/79/2025 ಪ್ರಕರಣದಲ್ಲಿ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಪ್ರಕರಣದಲ್ಲಿ 16 ಮಂದಿ ಆರೋಪಿಗಳಿಗೆ ಆ.20 ರಂದು 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಲಾಗಿತ್ತು.ನೋಟಿಸ್ ಬೆನ್ನಲ್ಲೇ ಆ.20 ರಂದು ಸಂಜೆ 5 ಗಂಟೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣಣವರ್, ವೆಂಕಪ್ಪ ಕೋಟ್ಯಾನ್, ಶ್ರೀನಿವಾಸ್ ಗೌಡ, ಮೋಹನ್ ಶೆಟ್ಟಿ , ತನುಷ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಗಣೇಶ್ ಶೆಟ್ಟಿ, ರಾಜೇಶ್ ಭಟ್ ಸೇರಿದಂತೆ 16 ಮಂದಿಗೆ ಆ.20 ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದರು.ಅವರೆಲ್ಲರೂ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ಹಾಜರಾಗದೆ ಇದ್ದಲ್ಲಿ BNS 35(6) ಅಡಿಯಲ್ಲಿ ಬಂಧಿಸಲಾಗುವುದಾಗಿ ನೋಟಿಸ್ ನಲ್ಲಿ ತಿಳಿಸಲಾಗಿತ್ತು.

ಆಸ್ಪತ್ರೆ ಮುಂಭಾಗ ಅಕ್ರಮ ಕೂಟದಲ್ಲಿ ಸಮೊಟೊ ಪ್ರಕರಣ, ಮಾಧ್ಯಮದ ಮೇಲೆ ಹಲ್ಲೆ ಪ್ರಕರಣ, ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆ ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮೂರು ಪ್ರಕರಣ ದಾಖಲಾಗಿತ್ತು.
ಅದರಂತೆ ಠಾಣೆಗೆ ಹಾಜರಾಗಿ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ಮುಂದೆ ವಿಚಾರಣೆ ಎದುರಿಸುತ್ತಿದ್ದಾರೆ.

Related posts

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠದಲ್ಲಿ ಶಿರೂರು ಮಠದ ಪೀಠಾಧಿಪತಿಗಳಿಂದ ವಿಶೇಷ ಪ್ರವಚನ

Suddi Udaya

ಕುತ್ಲೂರು:ಕಾಡಬಾಗಿಲು ಸೇತುಬೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ ಕೆ ಹರಿಪ್ರಸಾದ್ ರವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಅಭಿನಂದನೆ

Suddi Udaya

ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಶ್ರೀ ಧ.ಮಂ. ಸ್ನಾತಕೋತ್ತರ ಕಾಲೇಜಿನಲ್ಲಿ ಮಹಿಳಾ ಉದ್ಯಮಿಗಳ ಅವಕಾಶಗಳು ಹಾಗೂ ಅವರು ಎದುರಿಸುತ್ತಿರುವ ಸವಾಲುಗಳ ಕುರಿತು ಕ್ಯಾಂಡಿಡ್ ಟಾಕ್ ಕಾರ್ಯಕ್ರಮ

Suddi Udaya

ಬಂಗಾಡಿ ಅರಮನೆಯ ಹಿರಿಯರಾದ ಶತಾಯುಷಿ ರವಿರಾಜ್ ಬಲ್ಲಾಳ್ ವಿಧಿವಶ

Suddi Udaya
error: Content is protected !!