23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್

ಬೆಳ್ತಂಗಡಿ: ಉಜಿರೆ ಖಾಸಗಿ ಆಸ್ಪತ್ರೆ ಮುಂಭಾಗ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ಇದೀಗ ಹಾಜರಾಗಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಸಂಖ್ಯೆ 76/77/79/2025 ಪ್ರಕರಣದಲ್ಲಿ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಪ್ರಕರಣದಲ್ಲಿ 16 ಮಂದಿ ಆರೋಪಿಗಳಿಗೆ ಆ.20 ರಂದು 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಲಾಗಿತ್ತು.ನೋಟಿಸ್ ಬೆನ್ನಲ್ಲೇ ಆ.20 ರಂದು ಸಂಜೆ 5 ಗಂಟೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣಣವರ್, ವೆಂಕಪ್ಪ ಕೋಟ್ಯಾನ್, ಶ್ರೀನಿವಾಸ್ ಗೌಡ, ಮೋಹನ್ ಶೆಟ್ಟಿ , ತನುಷ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಗಣೇಶ್ ಶೆಟ್ಟಿ, ರಾಜೇಶ್ ಭಟ್ ಸೇರಿದಂತೆ 16 ಮಂದಿಗೆ ಆ.20 ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದರು.ಅವರೆಲ್ಲರೂ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ಹಾಜರಾಗದೆ ಇದ್ದಲ್ಲಿ BNS 35(6) ಅಡಿಯಲ್ಲಿ ಬಂಧಿಸಲಾಗುವುದಾಗಿ ನೋಟಿಸ್ ನಲ್ಲಿ ತಿಳಿಸಲಾಗಿತ್ತು.

ಆಸ್ಪತ್ರೆ ಮುಂಭಾಗ ಅಕ್ರಮ ಕೂಟದಲ್ಲಿ ಸಮೊಟೊ ಪ್ರಕರಣ, ಮಾಧ್ಯಮದ ಮೇಲೆ ಹಲ್ಲೆ ಪ್ರಕರಣ, ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆ ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮೂರು ಪ್ರಕರಣ ದಾಖಲಾಗಿತ್ತು.
ಅದರಂತೆ ಠಾಣೆಗೆ ಹಾಜರಾಗಿ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ಮುಂದೆ ವಿಚಾರಣೆ ಎದುರಿಸುತ್ತಿದ್ದಾರೆ.

Related posts

ಏ.17: ಬೆಳ್ತಂಗಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಶನಿಪೂಜೆ

Suddi Udaya

ಕೊಕ್ಕಡ: ತೆಂಕುಬೈಲಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಾಗತಂಬಿಲ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ: ಆದೇಶ ರದ್ದುಪಡಿಸಿದ ಹೈಕೋರ್ಟ್

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ಜೆಸಿ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ರವರನ್ನು ಸನ್ಮಾನಿಸಿದ ಶಾಸಕ ಹರೀಶ್ ಪೂಂಜ

Suddi Udaya

ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!