September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಗುರುದೇವ ಕಾಲೇಜಿನಲ್ಲಿ ಪ.ಪೂ. ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

ಬೆಳ್ತಂಗಡಿ : ‘ಕ್ರೀಡೆ ಮನಸ್ಸು ಮತ್ತು ದೇಹಕ್ಕೆ ಆರೋಗ್ಯ ನೀಡುವಂತಹುದು. ಶಾಲಾ ಕಾಲೇಜಿನ ಅವಧಿಯಲ್ಲಿ ಸಿಗುವ ಕ್ರೀಡೆಯ ಅವಕಾಶವನ್ನು ಸದ್ಭಳಕೆ ಮಾಡಿಕೊಂಡು ವಿದ್ಯಾರ್ಥಿ ದೆಸೆಯಲ್ಲಿಯೇ ಬದುಕನ್ನು ಬೆಳಗಿಸಿಕೊಳ್ಳಬೇಕು’ ಎಂದು ನಗರ ಪಂಚಾಯಿತಿ ಮುಖ್ಯಾಧಿಕಾರಿ ರಾಜೇಶ್ ಕೆ ಹೇಳಿದರು.


ಅವರು ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಟೇಬಲ್ ಟೆನ್ನಿಸ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.


ತಾಲೂಕು ಕ್ರೀಡಾ ಸಂಯೋಜಕ ಸಂದೀಪ್ ಕುಮಾರ್ ಶೆಟ್ಟಿ ಮಾತನಾಡಿ, ಶ್ರೀ ಗುರುದೇವ ಸಂಸ್ಥೆಯ ಸ್ಥಾಪಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರು ಹೃದಯ ವೈಶಾಲ್ಯತೆ ಉಳ್ಳವರಾಗಿದ್ದು, ಕ್ರೀಡೆಗೆ ಸದಾ ಪ್ರೋತ್ಸಾಹ ನೀಡುತ್ತಾ ಬಂದವರು ಎಂದರು.
ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.


ವೇದಿಕೆಯಲ್ಲಿ ಎಸ್.ಡಿ.ಎಂ. ವಸತಿ ಕಾಲೇಜಿನ ಉಪಪ್ರಾಂಶುಪಾಲ ಮನೀಶ್, ಕ್ರೀಡಾ ನಿರ್ದೇಶಕ ಲಕ್ಷ್ಮಣ ಗೌಡ, ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ, ಕ್ರೀಡಾ ನಿರ್ದೇಶಕ ರವಿರಾಮ್ ಶೆಟ್ಟಿ, ಕ್ರೀಡಾ ಸಂಯೋಜಕಿ ಅನನ್ಯ ಉಪಸ್ಥಿತರಿದ್ದರು.
ಕಾಲೇಜಿನ ಉಪ ಪ್ರಾಂಶುಪಾಲ ಬಿ. ಎ. ಶಮೀವುಲ್ಲಾ ಪ್ರಸ್ತಾವಿಸಿ ಸ್ವಾಗತಿಸಿದರು. ಕನ್ನಡ ಭಾಷಾ ಉಪನ್ಯಾಸಕ ರಾಕೇಶ್ ಕುಮಾರ್ ನಿರೂಪಿಸಿದರು. ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿ ಶುಭಲಕ್ಷ್ಮಿ ವಂದಿಸಿದರು.

Related posts

ಕೊಯ್ಯುರು : ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಬೆಳ್ತಂಗಡಿ ಟಿವಿಎಸ್ ಲೋಬೊ ಮೋಟರ್ಸ್ನಲ್ಲಿ ಎಲೆಕ್ಟ್ರಿಕಲ್ ದ್ವಿಚಕ್ರ ವಾಹನ ಬುಕ್ಕಿಂಗ್ ಹಾಗೂ ಸರ್ವಿಸ್ ಸೇವೆ ಲಭ್ಯ

Suddi Udaya

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಭಾರತದ ಟಾಪ್ 100 ಜ್ಯುವೆಲ್ಲರಿ ಪಟ್ಟಿಯಲ್ಲಿ ಪುತ್ತೂರಿನ “ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್” ಗೆ ಸ್ಥಾನ

Suddi Udaya

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!