32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಪ್ರಶಸ್ತಿ

ಬೆಳ್ತಂಗಡಿ: ಮೌಲೆ ಶೋಟೋಕಾನ್ ಕರಾಟೆ ಡೊ ಅಸೋಸಿಯೇಷನ್‌, ಇಂಡಿಯಾ, ಆಯೋಜಿಸಿದ 6ನೇ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು.

ಈ ಪಂದ್ಯಾವಳಿಯಲ್ಲಿ ಉಜಿರೆಯ ಮೋಹನ್ ಭಾಗವಹಿಸಿ ಬ್ಲಾಕ್ ಬೆಲ್ಟ್ 21ವಯೋಮಾನ ಕುಮಿಟೆ ವಿಭಾಗದಲ್ಲಿ ಪ್ರಥಮ ಹಾಗೂ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಉಜಿರೆಯ ಕುಂಜರ್ಪ ನಿವಾಸಿ ಶ್ರೀಮತಿ ವೇದಾವತಿ ಮತ್ತು ದಿ. ಆನಂದ ಪೂಜಾರಿ ರವರ ಪುತ್ರರಾಗಿರುತ್ತಾರೆ.

ನಿಟ್ಟೆ ಎನ್.ಎಂ.ಎ.ಎಂ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ತೃತೀಯ ವರ್ಷದ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಶಿಹಾನ್‌ ಅಬ್ದುಲ್ ರಹ್ಮಾನ್ ರವರೊಂದಿಗೆ ತರಬೇತಿಯನ್ನು ಪಡೆದಿರುತ್ತಾರೆ.

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya

ಬೆಳಾಲು ಪ್ರಾ.ಕೃ.ಪ.ಸ.ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ನಿಡ್ಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya
error: Content is protected !!