September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಎಸ್.ಎಲ್.ಸಿ, ಪಿಯುಸಿ ಇದೀಗ ಖಾಸಗಿ ಹಾಗೂ ನೇರ ಪರೀಕ್ಷೆಗೆ ಅನುಗ್ರಹ ಟ್ರೈನಿಂಗ್ ಕಾಲೇಜಿಗೆ ಬಿ.ಐ.ಎಸ್.ಇ ಬೋರ್ಡ್ ಮಾನ್ಯತೆ

ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಬೆಂಗಳೂರಿನ ಭಾರತ್ ಇನ್ಸಿಟ್ಯೂಟ್ ಆಫ್ ಸ್ಕೂಲ್ ಎಜುಕೇಶನ್ ನೊಂದಿಗೆ ಅನುಗ್ರಹ ಟ್ರೈನಿಂಗ್ ಕಾಲೇಜು ಆ.೧೯ ರಂದು ಅಧಿಕೃತ ಕರಾರು ಮಾಡಿಕೊಂಡಿದ್ದು, ಕಾಲೇಜಿಗೆ ಅಧಿಕೃತ ಮಾನ್ಯತೆ ದೊರಕಿದೆ.


ಇದರಿಂದ ದ.ಕ ಜಿಲ್ಲೆಯ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಖಾಸಗಿ ಮತ್ತು ನೇರ ಪರೀಕ್ಷಾ ಕೇಂದ್ರವಾಗಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿಯೇ ಪರೀಕ್ಷೆ ಬರೆಯುವ, ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಫೈಲ್ ಆದ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಹಾಗೂ ಮರು ಪರೀಕ್ಷೆ ಬರೆಯುವ, ಅರ್ಧದಲ್ಲಿ ಬಿಟ್ಟ ವಿದ್ಯಾರ್ಥಿಗಳಿಗೆ, ಫೈಲ್ ಆದ ವಿದ್ಯಾರ್ಥಿಗಳಿಗೆ ನೇರವಾಗಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಗೆ ಹಾಜರಾಗುವ ಅವಕಾಶಗಳು ಸಿಕ್ಕಿವೆ. ಇದೀಗ ಅನುಗ್ರಹ ಟ್ರೆöÊನಿಂಗ್ ಕಾಲೇಜಿನಲ್ಲಿ ವರ್ಷದಲ್ಲಿ ಎರಡು ಬಾರಿ ಪರೀಕ್ಷೆಗಳು ನಡೆಯಲಿದ್ದು, ವಿದ್ಯಾರ್ಥಿಗಳಿಗೆ ವರದಾನವಾಗಲಿದೆ.

ಸಂಸ್ಥೆಯ ಮುಖ್ಯಸ್ಥ ಎಂ ಜಿ ತಲ್ಹತ್ ಮತ್ತು ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರಾದ ಮುಹಮ್ಮದ್ ತೌಸೀಫ್ ಮತ್ತು ಅಬ್ದುಲ್ ಖಾದರ್ ಇದು ಬೆಳ್ತಂಗಡಿ ಹಾಗೂ ಜಿಲ್ಲೆಯ ಶಿಕ್ಷಣ ವಲಯಕ್ಕೆ ಹೊಸ ಚರಿತ್ರೆಯ ಆರಂಭ. ಪ್ರತಿಯೊಬ್ಬ ವಿದ್ಯಾರ್ಥಿಗೂ ಎಸ್.ಎಸ್.ಎಲ್.ಸಿ, ಪಿಯುಸಿ ಪೂರೈಸಿ ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ನಮ್ಮ ಸಂಸ್ಥೆ ಎಲ್ಲಾ ರೀತಿಯ ನೆರವು ನೀಡಲು ಸಜ್ಜಾಗಿದೆ. ಈ ಮೂಲಕ, ಶಿಕ್ಷಣದಲ್ಲಿ ಹಿಂದೆ ಬಿದ್ದ ವಿದ್ಯಾರ್ಥಿಗಳು ಮತ್ತೆ ತಮ್ಮ ಜೀವನವನ್ನು ಮರು ಕಟ್ಟಿಕೊಳ್ಳುವ ಅಪೂರ್ವ ಅವಕಾಶ ದೊರೆತಿದೆ ಎಂದಿದ್ದಾರೆ.

Related posts

ಬೆಳ್ತಂಗಡಿ ಪಶು ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಕ್ಕಡ: ಅಡ್ಡೈ ಶ್ರೀ ಶಿವಶಕ್ತಿ ಭಜನಾ ಮಂದಿರ ಇದರ ನೂತನ ಭಜನಾ ಮಂದಿರಕ್ಕೆ ಶಿಲಾನ್ಯಾಸ

Suddi Udaya

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಜಿಲ್ಲಾ ಚುನಾವಣಾ ಅಧಿಕಾರಿ ಮುಲೈ ಮುಗಿಲನ್ ಎಂಪಿ ರವರಿಂದ ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ

Suddi Udaya

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

Suddi Udaya

ಕುಕ್ಕೇಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಅನಿತಾ, ಉಪಾಧ್ಯಕ್ಷರಾಗಿ ಕುಸುಮ ಆಯ್ಕೆ

Suddi Udaya
error: Content is protected !!