September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

ಮಲವಂತಿಗೆ: ಮಲವಂತಿಗೆ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ಪ್ರಕಾಶ್ ಜೈನ್ ರವರ ಅಧ್ಯಕ್ಷತೆಯಲ್ಲಿ ಆ.21ರಂದು ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜೋಸೆಫ್ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ರಸ್ತೆಗಳ ಅಭಿವೃದ್ಧಿಗೆ ಆದ್ಯತೆಯನ್ನು ನೀಡಿ. ಕುಮೇರು ರಸ್ತೆ ಮೇಲೆ ಬಂಡೆ ಕಲ್ಲು ಬಿದ್ದು ಸಂಚಾರ ಕಷ್ಟಸಾಧ್ಯವಾಗಿದೆ. ಕುಮೇರು ವಾರ್ಡ್ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿಗಳ ಬದಲಾವಣೆ ಆಗದೆ ಹಲವು ವರ್ಷಗಳಾಗಿದ್ದು, ತಂತಿಗಳು ಜೋತು ಬಿದ್ದಿರುತ್ತದೆ. ಮಳೆಗಾಲದಲ್ಲಿ ಮರದ ಗೆಲ್ಲುಗಳು ತಂತಿ ಮೇಲೆ ಬೀಳುತ್ತಿರುವುದರಿಂದ ವಿದ್ಯುತ್ ಸಮಸ್ಯೆ ಕಾಡುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದರು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಉಪಾಧ್ಯಕ್ಷೆ ರೋಹಿಣಿ, ಸದಸ್ಯರಾದ ಕೆ.ಯು. ಮಹಮ್ಮದ್, ಡಿ. ದಿನೇಶ್ ಗೌಡ, ಪವಿತ್ರಾ, ಅರುಣಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ರಶ್ಮಿ ಸ್ವಾಗತಿಸಿ, ವಂದಿಸಿದರು. ಗ್ರಾ.ಪಂ. ಸಿಬ್ಬಂದಿಗಳು ಸಹಕರಿಸಿದರು.

Related posts

ತಣ್ಣೀರುಪಂತ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹತೆಗೊಳಿಸಿರುವುದಕ್ಕೆ ಖಂಡನೆ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರತಿಭಟನೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

Suddi Udaya

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಮರೋಡಿ: ಹಾರೋದ್ದು ನಿವಾಸಿ ಗೀತಾ ನಿಧನ

Suddi Udaya
error: Content is protected !!