25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರು ಸೇರಿ ಮೃತದೇಹ ಹೂತು ಹಾಕಿರುವ ಆರೋಪ ಪ್ರಕರಣ : ಭಾಸ್ಕರ್ ನಾಯ್ಕ್ ರವರಿಂದ ಎಸ್.ಐ.ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ : ಉಜಿರೆಯಲ್ಲಿ ಕೆಲವು ವ್ಯಕ್ತಿಗಳು ಸೇರಿಕೊಂಡು ಮೃತದೇಹವೊಂದನ್ನು ಹೂತು ಹಾಕಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದರೂ ಸಮರ್ಪಕವಾಗಿ ತನಿಖೆ ನಡೆದಿಲ್ಲ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಉಜಿರೆ ನಿವಾಸಿ ಭಾಸ್ಕರ್ ನಾಯ್ಕ್ ಬಡೆಕೊಟ್ಟು ಎಂಬವರು ಎಸ್.ಐ.ಟಿ ಕಚೇರಿಗೆ ಆ.20 ರಂದು ದೂರು ನೀಡಿದ್ದಾರೆ.

ಎಸ್.ಐ.ಟಿ ಅಧಿಕಾರಿಗಳು ದೂರು ಸ್ವೀಕರಿಸಿದ್ದು ದೂರಿನ ಬಗ್ಗೆ ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದು ಯಾವುದೇ ಅಪರಾಧ ಕೃತ್ಯದ ಕುರಿತು ಮಾಹಿತಿ ದೂರನ್ನು ಸ್ಥಳೀಯ ಪೊಲೀಸ್ ಠಾಣೆಗೆ ಮುಂದಿನ ಕ್ರಮ ಜರುಗಿಸುವ ಕುರಿತು ಸಲ್ಲಿಸುವಂತೆ ಹಿಂಬರಹ ನೀಡಿದ್ದಾರೆ.

ಉಜಿರೆ ಗ್ರಾಮದ ನಿವಾಸಿಯಾಗಿರುವ ಸೋಂಪ ಯಾನೆ ಬಾಲಕೃಷ್ಣ ಶೆಟ್ಟಿ ಎಂಬವರು ಕಾಣೆಯಾಗಿದ್ದು ಈ ಬಗ್ಗೆ 18/12/2018 ರಂದು ದೂರನ್ನು ನೀಡಲಾಗಿತ್ತು. ಇದೆ ಸಂದರ್ಭದಲ್ಲಿ ಉಜಿರೆ ಬಿಲ್ಲರೋಡಿ ಎಂಬಲ್ಲಿ ಸರಕಾರಿ ಸ್ಥಳದಲ್ಲಿ ಮರ ಕಡಿಯುವ ವೇಳೆ ಮೃತದೇಹವೊಂದು ಕಂಡು ಬಂದಿರುವುದಾಗಿ ತಿಳಿದು ಬಂದಿದ್ದು ಆ ಮೃತದೇಹವನ್ನು ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರು ಸೇರಿ ಜೆಸಿಬಿ ಮೂಲಕ ಮುಚ್ಚಿಹಾಕಿದ್ದಾರೆ ಎಂಬ ವದಂತಿಯು ಹರಿದಾಡುತ್ತಿದೆ.

ಈ ಬಗ್ಗೆ ನಾಪತ್ತೆಯಾದ ವ್ಯಕ್ತಿಯ ಮನೆಯವರಲ್ಲಿ ದೂರು ನೀಡಲು ಹೇಳಿದರೂ ಅವರು ದೂರು ನೀಡಿಲ್ಲ. ಇದಾದ ಬಳಿಕ ತಾನು ಬೆಳ್ತಂಗಡಿ ಪೊಲೀಸರಿಗೆ 8/12/2018ರಂದು ದೂರು ನೀಡಿದ್ದೆ ಸಂಶಯವಿರುವ ವ್ಯಕ್ತಿಗಳ ಹೆಸರುಗಳನ್ನು ನೀಡಿದ್ದೆ ಈ ಬಗ್ಗೆ ಪ್ರಕರಣ ದಾಖಲಿಸಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೆ ಒತ್ತಡಕ್ಕೆ ಮಣಿದು ಸಮರ್ಪಕವಾಗಿ ತನಿಖೆಯನ್ನು ನಡೆಸಿಲ್ಲ. ನಾಪತ್ತೆಯಾದ ವ್ಯಕ್ತಿ ಅಂದಿನಿಂದ ಇಂದಿನ ವರೆಗೂ ಹಿಂತಿರುಗಿ ಬಂದಿಲ್ಲ. ಈ ಹಿನ್ನಲೆಯಲ್ಲಿ ಸೋಂಪ ಯಾನೆ ಬಾಲಕೃಷ್ಣ ಶೆಟ್ಟಿಯ ಮೃತದೇಹವನ್ನು ಕಾನೂನು ಬಾಹಿರವಾಗಿ ಸರಕಾರಿ ಜಾಗದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗು ಇತರರು ಹೂತು ಹಾಕಿರುವುದಾಗಿ ಅನುಮಾನವಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಎಸ್.ಐ.ಟಿ ಅಧಿಕಾರಿಗಳು ದೂರನ್ನು ಸ್ವೀಕರಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಡಿ. 17: ಶ್ರೀ ಕ್ಷೇತ್ರ ಸೌತಡ್ಕದ ಗಣೇಶ ಸಭಾಭವನದಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವ

Suddi Udaya

ನಿಡ್ಲೆ ಶೀರೂರು ಪರ್ಯಾಯ ಸ್ವಾಗತ ಸಮಿತಿಯಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಹುಟ್ಟೂರ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಶ್ರೀ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!