July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರು ಸೇರಿ ಮೃತದೇಹ ಹೂತು ಹಾಕಿರುವ ಆರೋಪ ಪ್ರಕರಣ : ಭಾಸ್ಕರ್ ನಾಯ್ಕ್ ರವರಿಂದ ಎಸ್.ಐ.ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ : ಉಜಿರೆಯಲ್ಲಿ ಕೆಲವು ವ್ಯಕ್ತಿಗಳು ಸೇರಿಕೊಂಡು ಮೃತದೇಹವೊಂದನ್ನು ಹೂತು ಹಾಕಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದರೂ ಸಮರ್ಪಕವಾಗಿ ತನಿಖೆ ನಡೆದಿಲ್ಲ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಉಜಿರೆ ನಿವಾಸಿ ಭಾಸ್ಕರ್ ನಾಯ್ಕ್ ಬಡೆಕೊಟ್ಟು ಎಂಬವರು ಎಸ್.ಐ.ಟಿ ಕಚೇರಿಗೆ ಆ.20 ರಂದು ದೂರು ನೀಡಿದ್ದಾರೆ.

ಎಸ್.ಐ.ಟಿ ಅಧಿಕಾರಿಗಳು ದೂರು ಸ್ವೀಕರಿಸಿದ್ದು ದೂರಿನ ಬಗ್ಗೆ ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದು ಯಾವುದೇ ಅಪರಾಧ ಕೃತ್ಯದ ಕುರಿತು ಮಾಹಿತಿ ದೂರನ್ನು ಸ್ಥಳೀಯ ಪೊಲೀಸ್ ಠಾಣೆಗೆ ಮುಂದಿನ ಕ್ರಮ ಜರುಗಿಸುವ ಕುರಿತು ಸಲ್ಲಿಸುವಂತೆ ಹಿಂಬರಹ ನೀಡಿದ್ದಾರೆ.

ಉಜಿರೆ ಗ್ರಾಮದ ನಿವಾಸಿಯಾಗಿರುವ ಸೋಂಪ ಯಾನೆ ಬಾಲಕೃಷ್ಣ ಶೆಟ್ಟಿ ಎಂಬವರು ಕಾಣೆಯಾಗಿದ್ದು ಈ ಬಗ್ಗೆ 18/12/2018 ರಂದು ದೂರನ್ನು ನೀಡಲಾಗಿತ್ತು. ಇದೆ ಸಂದರ್ಭದಲ್ಲಿ ಉಜಿರೆ ಬಿಲ್ಲರೋಡಿ ಎಂಬಲ್ಲಿ ಸರಕಾರಿ ಸ್ಥಳದಲ್ಲಿ ಮರ ಕಡಿಯುವ ವೇಳೆ ಮೃತದೇಹವೊಂದು ಕಂಡು ಬಂದಿರುವುದಾಗಿ ತಿಳಿದು ಬಂದಿದ್ದು ಆ ಮೃತದೇಹವನ್ನು ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರು ಸೇರಿ ಜೆಸಿಬಿ ಮೂಲಕ ಮುಚ್ಚಿಹಾಕಿದ್ದಾರೆ ಎಂಬ ವದಂತಿಯು ಹರಿದಾಡುತ್ತಿದೆ.

ಈ ಬಗ್ಗೆ ನಾಪತ್ತೆಯಾದ ವ್ಯಕ್ತಿಯ ಮನೆಯವರಲ್ಲಿ ದೂರು ನೀಡಲು ಹೇಳಿದರೂ ಅವರು ದೂರು ನೀಡಿಲ್ಲ. ಇದಾದ ಬಳಿಕ ತಾನು ಬೆಳ್ತಂಗಡಿ ಪೊಲೀಸರಿಗೆ 8/12/2018ರಂದು ದೂರು ನೀಡಿದ್ದೆ ಸಂಶಯವಿರುವ ವ್ಯಕ್ತಿಗಳ ಹೆಸರುಗಳನ್ನು ನೀಡಿದ್ದೆ ಈ ಬಗ್ಗೆ ಪ್ರಕರಣ ದಾಖಲಿಸಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೆ ಒತ್ತಡಕ್ಕೆ ಮಣಿದು ಸಮರ್ಪಕವಾಗಿ ತನಿಖೆಯನ್ನು ನಡೆಸಿಲ್ಲ. ನಾಪತ್ತೆಯಾದ ವ್ಯಕ್ತಿ ಅಂದಿನಿಂದ ಇಂದಿನ ವರೆಗೂ ಹಿಂತಿರುಗಿ ಬಂದಿಲ್ಲ. ಈ ಹಿನ್ನಲೆಯಲ್ಲಿ ಸೋಂಪ ಯಾನೆ ಬಾಲಕೃಷ್ಣ ಶೆಟ್ಟಿಯ ಮೃತದೇಹವನ್ನು ಕಾನೂನು ಬಾಹಿರವಾಗಿ ಸರಕಾರಿ ಜಾಗದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗು ಇತರರು ಹೂತು ಹಾಕಿರುವುದಾಗಿ ಅನುಮಾನವಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಎಸ್.ಐ.ಟಿ ಅಧಿಕಾರಿಗಳು ದೂರನ್ನು ಸ್ವೀಕರಿಸಿದ್ದಾರೆ.

Related posts

ಬೆಳಾಲು ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂ.ಮಾ. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಆಯ್ಕೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಮನ್ ಶರ್ ಪ್ರಾಥಮಿಕ ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕುಕ್ಕೇಡಿ: ಶ್ರೀ ಶಾರಾದಾಂಬ ಮಹಿಳಾ ಭಜನಾ ಸಮಿತಿಯ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಾ.2: ಬೆಳ್ತಂಗಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ – ದಂತ ತಪಾಸಣಾ ಶಿಬಿರ

Suddi Udaya
error: Content is protected !!