July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಶಕ್ಕೆ ಪಡೆಯಲಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಂಧನ

ಬೆಳ್ತಂಗಡಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಮಾತನಾಡಿದ ಆರೋಪದಲ್ಲಿ ವಶಕ್ಕೆ ಪಡೆದಿದ್ದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ.

ಕಾನೂನು ಸುವ್ಯವಸ್ಥೆಗೆ ಅಡ್ಡಿಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬ್ರಹ್ಮಾವರ ಠಾಣೆ ಪರಿಸರದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಬಂದೋಬಸ್ತ್ ಬಿಗಿಗೊಳಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಬಿ.ಎಲ್‌. ಸಂತೋಷ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ವಿಡಿಯೋ ಹರಿದಾಡಿದ್ದು, ಇದರ ಬೆನ್ನಿಗೇ ವ್ಯಕ್ತಿಯೋರ್ವರು ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದರು. ವಿಚಾರಣೆಗೆ ಹಾಜರಾಗುವಂತೆ ಬ್ರಹ್ಮಾವರ ಪೊಲೀಸರು ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇಂದು ಬೆಳ್ತಂಗಡಿ ತಾಲೂಕು ಉಜಿರೆಯ ಮಹೇಶ್ ಶೆಟ್ಟಿ ನಿವಾಸಕ್ಕೆ ಆಗಮಿಸಿದ್ದ ಪೊಲೀಸರು ಅವರನ್ನು ವಶಕ್ಕೆ ಪಡೆದು ಬ್ರಹ್ಮಾವರಕ್ಕೆ ಕರೆದೊಯ್ದಿದ್ದು, ಕೆಲಕಾಲ ವಿಚಾರಣೆ ನಡೆಸಿದ ಬಳಿಕ ಅವರನ್ನು ಬಂಧಿಸಲಾಗಿದೆ.

Related posts

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಕು| ಅನನ್ಯಾ ರಿಗೆ ಸನ್ಮಾನ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿಎಂಬ್ರಾಡರಿ ಮತ್ತು ಫ್ಯಾಬ್ರಿಕ್ ಪೇಟಿಂಗ್ ತರಬೇತಿಯ ಸಮಾರೋಪ

Suddi Udaya

ಜೂ. 29 : ಉಜಿರೆಯಲ್ಲಿ ರೈನಾಥನ್ ಸ್ಪರ್ಧೆ, ಸಂತೋಷದಾಯಕ ಮಳೆಗಾಲದ ಓಟ: ಮಾದಕ ವ್ಯವಸನದ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶವೇ ರೈನಥಾನ್-2025

Suddi Udaya

ಜು.5: ಉಪ್ಪಿನಂಗಡಿ – ಕುಪ್ಪೆಟ್ಟಿ ಸಂಚಾರಕ್ಕೆ ಯೋಗ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ : ಬಿಜೆಪಿ ಕಣಿಯೂರು ಮಹಾಶಕ್ತಿ ಕೇಂದ್ರ ವತಿಯಿಂದ ಪ್ರತಿಭಟನೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ನಾರ್ಮ್ ರೌಂಡರ್ ರಾಬಿನ್ ಪಂದ್ಯಾವಳಿಯಲ್ಲಿ ಬೆಳ್ತಂಗಡಿಯ ಇಶಾ ಶರ್ಮಾ ರವರಿಗೆ ರಾಜ್ಯದ ಮೊದಲ ಮಹಿಳಾ ಗ್ರ್ಯಾಂಡ್ ಮಾಸ್ಟರ್ ಬಿರುದು

Suddi Udaya
error: Content is protected !!