July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್, ಸಾರಿ ಮೇಳ : ನೇರವಾಗಿ ಫ್ಯಾಕ್ಟರಿಯಿಂದ ಖರೀದಿ, ಗ್ರಾಹಕರಿಗೆ ಶೇ.20 ರಿಯಾಯಿತಿ ದರದಲ್ಲಿ ಮಾರಾಟ

ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ವಿಶೇಷ ಸ್ಪೆಷಲ್ ಡಿಸ್ಕೌಂಟ್ ಸೇಲ್ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯ ಮಾಲಕ ಮೋಹನ್ ಚೌಧರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಆ.15 ರಿಂದ ಪ್ರಾರಂಭಗೊಂಡಿದೆ.ರೂ. 150 ರಿಂದ 15 ಸಾವಿರ ಬೆಲೆಯ ಬಟ್ಟೆಗಳ ಮೇಲೆ ಶೇ.20 ರಿಯಾಯಿತಿ ಲಭ್ಯವಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

ಕಳೆದ ಹಲವಾರು ವರ್ಷಗಳಿಂದ ಗ್ರಾಹಕರಿಗೆ ಅನುಕೂಲವಾಗುವಂತೆ ರಾಜ್ಯದ ಹಲವು ಫ್ಯಾಕ್ಟರಿಗಳಿಂದ ಬಟ್ಟೆಗಳನ್ನು ನೇರವಾಗಿ ಖರೀದಿಸಿ ಕಡಿಮೆ ಬೆಲೆಯಲ್ಲಿ ಗ್ರಾಹಕರಿಗೆ ವಿವಿಧ ವಿನ್ಯಾಸದ ಬಟ್ಟೆಗಳನ್ನು ನೀಡಿ ಸಂಸ್ಥೆಯು ಪ್ರಸಿದ್ಧಿಯಾಗಿತ್ತು. ಈ ಭಾರಿ ವಿಶೇಷವಾಗಿ ಸಾರಿ ಮೇಳ ಹಮ್ಮಿಕೊಂಡಿದ್ದು ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಾಲಾ ಕಾಲೇಜು ಉದ್ಯೋಗಿಗಳಿಗೆ, ಸಂಘ ಸಂಸ್ಥೆಗಳಿಗೆ ಬೇಕಾದ ಸಮವಸ್ತ್ರ, ವಿವಿಧ ವಿನ್ಯಾಸದ ಸಾರಿಗಳು ಹಾಗೂ ಮಹಿಳೆಯರ, ಪುರುಷರ, ಮಕ್ಕಳ ಬಗೆ ಬಗೆಯ ವಸ್ತ್ರಗಳು ಇಲ್ಲಿ ಲಭ್ಯವಿದೆ.

ಗ್ರಾಹಕರಿಗೆ ಸಂತೃಪ್ತಿಗೆ ಮೊದಲ ಆಧ್ಯತೆ: ಮೋಹನ್ ಚೌಧರಿ
2015 ರಲ್ಲಿ ಉಜಿರೆಯಲ್ಲಿ ಶ್ರೀದುರ್ಗಾ ಟೆಕ್ಸ್ ಟೈಲ್ಸ್ ಸಂಸ್ಥೆ ಪ್ರಾರಂಭಿಸಿದಾಗ ಇಲ್ಲಿಯ ಜನರು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಬಟ್ಟೆಯ ಬೆಲೆ, ಗುಣಮಟ್ಟ, ಸರ್ವಿಸ್ ನೋಡಿ ಗ್ರಾಹಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗ್ರಾಹಕರ ಆಶೀರ್ವಾದದಿಂದ ನಮ್ಮ ಸಂಸ್ಥೆ ತಾಲೂಕು ಹಾಗೂ ಜಿಲ್ಲೆಯ ವಿವಿಧಡೆ ವಿಸ್ತರಣೆಗೊಂಡಿತ್ತು.ಕೋವಿಡ್ ಸಮಯದಲ್ಲಿ ಉದ್ಯಮದಲ್ಲಿ ಸಮಸ್ಯೆ ಪ್ರಾರಂಭವಾಯಿತು. ಆದ್ದರಿಂದ ಗ್ರಾಹಕರಿಗೆ ಒಳ್ಳೆಯ ಸೇವೆ ನೀಡಲು ಸಾಧ್ಯವಾಗಿಲ್ಲ. ಈದೀಗ ಉಜಿರೆಯ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಗ್ರಾಹಕರಿಗೆ ಉತ್ತಮ ಸೇವೆ ಮತ್ತು ರಿಯಾಯಿತಿ ದರದಲ್ಲಿ ಬಟ್ಟೆಗಳನ್ನು ನೀಡುವ ಸಲುವಾಗಿ ದೇಶದ 16 ರಾಜ್ಯಗಳಿಂದ ನೇರವಾಗಿ ಫ್ಯಾಕ್ಟರಿ ಮೂಲಕ ಖರೀದಿಸಿ ಗ್ರಾಹಕರಿಗೆ ಕಡಿಮೆ ಬೆಲೆಯಲ್ಲಿ ನೀಡುತ್ತಿದ್ದೇವೆ. ಪ್ರತಿ ವರ್ಷದಂತೆ ಈ ಬಾರಿಯೂ ಸಾರಿ ಮೇಳ ಆಯೋಜಿಸಿದ್ದೇವೆ. ರೂ. 150 ರಿಂದ 15 ಸಾವಿರದವರೆಗೆ ಎಲ್ಲಾ ಸೀರೆಗಳ ಮೇಲೆ 20% ರಿಯಾಯಿತಿ ಇದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ ಎಂದು ಮೋಹನ್ ಚೌಧರಿ ತಿಳಿಸಿದ್ದಾರೆ.

Related posts

ಏ.7: : ಶ್ರೀ ದುರ್ಗಾ ಬ್ಯಾಟರಿ ಸೋಲಾರ್ ಮತ್ತು ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya

ಅಂತರರಾಷ್ಟ್ರೀಯ ಇಂಗ್ಲಿಷ್ ಒಲಿಂಪಿಯಾಡ್ 2025–26: ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಡ್

Suddi Udaya

ನ.9: ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ನಾರಾವಿ ಗೂಡಂಗಡಿ ವ್ಯಾಪಾರಿ ಶಿವಯ್ಯ ಪೂಜಾರಿ ನಿಧನ

Suddi Udaya
error: Content is protected !!