July 24, 2026
Uncategorizedವರದಿ

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಕನ್ಯಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ದೇಣಿಗೆ

ಕನ್ಯಾಡಿ: ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವದಂದು ಕನ್ಯಾಡಿ-II ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯವರಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ.೩೩,೩೩೩/- ದೇಣಿಗೆಯನ್ನು ನೀಡಿ ಕಟ್ಟಡದ ನಿರ್ಮಾಣ ಶೀಘ್ರವಾಗಿ ನೆರವೇರುವಂತೆ ಶುಭಹಾರೈಸಿದರು.

ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕ ರಾವ್ ರವರು ಸಂಸ್ಥೆಯ ಪರವಾಗಿ ದೇಣಿಗೆಯನ್ನು ಸ್ವೀಕರಿಸಿ ಧನ್ಯವಾದವಿತ್ತರು. ಇದೇ ಸಂದರ್ಭದಲ್ಲಿ ಅನಾರೋಗ್ಯದಿಂದಿರುವ ಸಂಘಟನಾ ಕಾರ್ಯದರ್ಶಿ ಹಾಗೂ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಕೇಶವ ಎಂ. ರವರಿಗೆ ರೂ.೧೦ ಸಾವಿರ ಚೆಕ್‌ನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಅಧ್ಯಕ್ಷ ಪ್ರಭಾಕರ್ ಗೌಡ ಬೊಳ್ಮ, ಉಪಾಧ್ಯಕ್ಷ ಯತೀಶ್ ಸುವರ್ಣ, ಸಂಯೋಜಕ ರಾಜೇಂದ್ರ ಅಜ್ರಿ, ಉದ್ಘಾಟಕ ದೇವದಾಸ ಎಲ್. ಶೆಟ್ಟಿ ಬದ್ಯಾರು, ಸೌತಡ್ಕ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕ ಸತ್ಯಪ್ರಿಯ ಕಲ್ಲೂರಾಯ, ಧರ್ಮಸ್ಥಳ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ವಿಮಲಾ ಪರಮೇಶ್ವರ, ಶಿವ ಪಾರ್ವತಿ ಕಲ್ಯಾಣ ಮಂಟಪ ಮಾಲಕ ಗಿರೀಶ್ ಕುದ್ರೆಂತ್ತಾಯ, ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷ ದೇವಸ್ಯ ಟಿ, ಬೃಂದಾವನ ಮನೆ ಕನ್ಯಾಡಿ II ಶ್ರೀಮತಿ ಪವಿತ್ರ ಸುಕುಮಾರ ಶೆಟ್ಟಿ, ಧರ್ಮಸ್ಥಳ ಗ್ರಾ.ಪಂ. ಸದಸ್ಯರಾದ ವಸಂತ ನಾಯ್ಕ, ಶ್ರೀಮತಿ ರೇವತಿ, ಕೆ. ನಂದ ಅಧ್ಯಕ್ಷರು ಎಸ್‌ಡಿಎಂಸಿ, ಕನ್ಯಾಡಿ-II ಪ್ರ.ಮು.ಶಿ ಶ್ರೀಮತಿ ಪುಷ್ಪಾ ಎನ್. ಉಪಸ್ಥಿತರಿದ್ದರು.

Related posts

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಯಕ್ಷಧ್ವನಿ ಲಹರಿ ತಿಂಗಳ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

Suddi Udaya

ಕಾಶಿಪಟ್ಣ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಕ್ಸಲೆ೦ಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿರಶ್ಮಿತಾ ಜೈನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬಹುನಿರೀಕ್ಷಿತ ರಾನಿ ಚಲನಚಿತ್ರದ ನಾಯಕ ನಟ ಗಂಭೀರ ಗಾಯ: ಕಾರ್ಯಕಾರಿ ನಿರ್ಮಾಪಕ ಕೊಕ್ರಾಡಿಯ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರು

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ನಾಗಶ್ರೀ ‘ಎ’ ಸ್ವ-ಸಹಾಯ ಸಂಘದ ಸದಸ್ಯೆ ಡೊಂಬಕ್ಕರವರಿಗೆ ವೀಲ್ ಚೇರ್ ಹಾಗೂ ಸಹಾಯಧನ ವಿತರಣೆ

Suddi Udaya
error: Content is protected !!