25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

ಉಜಿರೆ: ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಡುಪಿ ಪೋಲೀಸರು ಇಂದು ಬೆಳಿಗ್ಗೆ ವಶಕ್ಕೆ ಪಡೆದಿದ್ದಾರೆ.

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು
ಬ್ರಹ್ಮವಾರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧ ಆ.21
ರಂದು ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದುಕೊಂಡು ತೆರಳಿದ್ದಾರೆ.

ಆ.21 ರಂದು ಉಡುಪಿ ಜಿಲ್ಲಾ ಎಡಿಷನ್ ಎಸ್ಪಿ ಸುಧಾಕರ್ ಹೆಗ್ಡೆ ನೇತೃತ್ವದಲ್ಲಿ ಪೊಲೀಸ್ ವಾಹನದಲ್ಲಿ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಆಗಮಿಸಿದ್ದಾರೆ. ಈ ಮಧ್ಯೆ ವಾದ- ವಿವಾದಗಳು ನಡೆದು ತಿಮರೋಡಿಯವರನ್ನು ವಶಕ್ಕೆ ಪಡೆಯಲಾಗಿದೆ.
ಆ.16 ರಂದು ಸಾಮಾಜಿಕ ಜಾಲ ತಾಣದಲ್ಲಿ. ಮಹೇಶ ಶೆಟ್ಟಿ ತಿಮರೋಡಿಯವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ, ಮಹೇಶ್ ಶೆಟ್ಟಿ ತಿಮರೋಡಿಯವರ ವಿರುದ್ಧ ಕಾನೂನು ಕ್ರಮಕ್ಕಾಗಿ ರಾಜೀವ ಕುಲಾಲ್, ಉಡುಪಿ ಗ್ರಾಮಾಂತರ ಬಿಜಿಪಿಯ ಮಂದಾಳತ್ವದಲ್ಲಿ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 177/2025 US 196 (1), 352, 353(2) BNS ರಂತೆ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆದು ಕರೆದೊಯ್ದುದ್ದಾರೆ.

Related posts

ಮಹಿಳೆ ಮಗುವಿಗೆ ಮಾನಸಿಕ ಹಿಂಸೆ- ವರದಕ್ಷಿಣೆ ಕಿರುಕುಳ ಆರೋಪ: ಬೆಳಾಲಿನ ಮಹಿಳೆ ನೀಡಿದ ದೂರಿನಂತೆ ಪತಿ, ಮನೆಯವರ ಮೇಲೆ ಕೇಸು

Suddi Udaya

ಗುರುವಾಯನಕೆರೆ: ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು, ಟ್ರಾಫಿಕ್ ಜಾಮ್

Suddi Udaya

ಶಿರ್ಲಾಲು ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಅ.14-15: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಪ್ರದರ್ಶನ , ದೀಪಾವಳಿ ಬಿಗ್ ಸೇಲ್

Suddi Udaya

ಬೆಳ್ತಂಗಡಿ : ಕಾಲುಗಳನ್ನು ಕತ್ತರಿಸಿದ ರೀತಿಯಲ್ಲಿ ಚಿರತೆ ಮೃತದೇಹ ಪತ್ತೆ: ಸ್ಥಳಕ್ಕೆ ಹಿರಿಯ ಅಧಿಕಾರಿಗಳ ದೌಡು ಪರಿಶೀಲನೆ

Suddi Udaya

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

Suddi Udaya
error: Content is protected !!