22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

ಉಜಿರೆ: ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಡುಪಿ ಪೋಲೀಸರು ಇಂದು ಬೆಳಿಗ್ಗೆ ವಶಕ್ಕೆ ಪಡೆದಿದ್ದಾರೆ.

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು
ಬ್ರಹ್ಮವಾರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧ ಆ.21
ರಂದು ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದುಕೊಂಡು ತೆರಳಿದ್ದಾರೆ.

ಆ.21 ರಂದು ಉಡುಪಿ ಜಿಲ್ಲಾ ಎಡಿಷನ್ ಎಸ್ಪಿ ಸುಧಾಕರ್ ಹೆಗ್ಡೆ ನೇತೃತ್ವದಲ್ಲಿ ಪೊಲೀಸ್ ವಾಹನದಲ್ಲಿ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಆಗಮಿಸಿದ್ದಾರೆ. ಈ ಮಧ್ಯೆ ವಾದ- ವಿವಾದಗಳು ನಡೆದು ತಿಮರೋಡಿಯವರನ್ನು ವಶಕ್ಕೆ ಪಡೆಯಲಾಗಿದೆ.
ಆ.16 ರಂದು ಸಾಮಾಜಿಕ ಜಾಲ ತಾಣದಲ್ಲಿ. ಮಹೇಶ ಶೆಟ್ಟಿ ತಿಮರೋಡಿಯವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ, ಮಹೇಶ್ ಶೆಟ್ಟಿ ತಿಮರೋಡಿಯವರ ವಿರುದ್ಧ ಕಾನೂನು ಕ್ರಮಕ್ಕಾಗಿ ರಾಜೀವ ಕುಲಾಲ್, ಉಡುಪಿ ಗ್ರಾಮಾಂತರ ಬಿಜಿಪಿಯ ಮಂದಾಳತ್ವದಲ್ಲಿ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 177/2025 US 196 (1), 352, 353(2) BNS ರಂತೆ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆದು ಕರೆದೊಯ್ದುದ್ದಾರೆ.

Related posts

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ಮಂಗಳೂರು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತಜ್ಞ ವೈದ್ಯರು ಮತ್ತು ಪ್ರೊಫೆಸರ್ ಗಳ ತಂಡ ಭೇಟಿ

Suddi Udaya

ಬಂಗಾಡಿ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ ನಿಧನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಂಗಳೂರು ಹೈಕೋರ್ಟ್ ಗೆ ಹಾಜರು

Suddi Udaya

ಧರ್ಮಸ್ಥಳ: ನೀರಚಿಲುಮೆ ಬಸ್ ಸ್ಟ್ಯಾಂಡಿನ ಬಳಿ ಹೆದ್ದಾರಿ ಬದಿಯಲ್ಲಿ ಕುಸಿದ ರಸ್ತೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya
error: Content is protected !!