22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನ ಆಚರಣೆ

ಉಜಿರೆ: ಭಾರತದ ಅತ್ಯಂತ ಕಿರಿಯ ಪ್ರಧಾನಿ ಎನಿಸಿದ ಹಾಗೂ ವಿಜ್ಞಾನ ತಂತ್ರಜ್ಞಾನ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ ದಿ.ರಾಜೀವ್ ಗಾಂಧಿಯವರ ಜನ್ಮ ಜಯಂತಿಯ ಪ್ರಯುಕ್ತ ನಡೆಸಲ್ಪಡುವ ಸದ್ಭಾವನಾ ದಿನಾಚರಣೆಯನ್ನು ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆಯನ್ನು ನೆರವೇರಿಸುವ ಮೂಲಕ ವಿನೂತನವಾಗಿ ಆಚರಿಸಲಾಯಿತು.

ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್. ಬಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ವಿವಿಧತೆಯಲ್ಲಿ ಏಕತೆಯನ್ನು ಸಾರುವುದೇ ಭಾರತದ ಅಸ್ಮಿತೆ. ಸರ್ವ ಧರ್ಮಗಳಲ್ಲಿಯೂ ಸದ್ಭಾವನೆಯನ್ನು ಮೂಡಿಸುವುದರ ಮೂಲಕ ಸಮಾಜದಲ್ಲಿ ನಡೆಯುತ್ತಿರುವ ಸಂಘರ್ಷಗಳನ್ನು ತಡೆಯಬಹುದು. ಶಾಂತಿ ಸೌಹಾರ್ಧತೆಗಳು ಒಂದು ದೇಶದ ಅಭಿವೃದ್ಧಿಗೆ ರಹದಾರಿಯಾಗುತ್ತದೆಯೇ ಹೊರತು ದ್ವೇಷ ಸಂಘರ್ಷಗಳಿಂದ ಸಾಧ್ಯವಿಲ್ಲ ಎಂದರು.

ವಿದ್ಯಾರ್ಥಿಗಳಾದ ಧರೇಶ್ ಹಿಂದೂ ಧರ್ಮದ ,ಅಫೀಫಾ ಇಸ್ಲಾಂ ಧರ್ಮದ,ನಿಜಾ ಕ್ರೈಸ್ತ ಧರ್ಮದ, ಪವಿತ್ರಾ ಜೈನ್, ಜೈನ ಧರ್ಮದ ಮತ್ತು ಲಿಖಿತಾ ಬೌದ್ಧ ಧರ್ಮದ ಪ್ರಾರ್ಥನೆ ಹಾಗೂ ಸಂದೇಶವನ್ನು ಸಾರಿದರು. ಮಹಾತ್ಮಾ ಗಾಂಧಿಯವರ ಪ್ರಿಯ ಭಜನೆ ರಘುಪತಿ ರಾಘವ ರಾಜಾರಾಮ್ ಅನ್ನು ವಿದ್ಯಾರ್ಥಿಗಳು ಸಾಮೂಹಿಕವಾಗಿ ಹಾಡಿದರು.

ವಿದ್ಯಾರ್ಥಿ ಪ್ರಣವ್ ಕೃಷ್ಣ ಭಟ್ ಸ್ವಾಗತಿಸಿ, ನಿರ್ವಹಿಸಿದರು ಶ್ರೀಲಕ್ಷ್ಮಿ ವಂದಿಸಿದರು. ಕಾಲೇಜಿನ ಕಲಾ ವಿಭಾಗದ ಸಂಘ ವ್ಯುತ್ಪತ್ತಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ದಿವ್ಯಾ ಕುಮಾರಿ, ಶ್ಯಾಮಿಲ ಹಾಗೂ ಡಾ. ಸಾಜಿದ ಉಪಸ್ಥಿತರಿದ್ದು ಸಹಕರಿಸಿದರು.

Related posts

ಕರಾಟೆ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಥಮ್ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

Suddi Udaya

ಚುನಾವಣಾ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ : ಎ.17 ಸೋಮವಾರ ಬೆಳ್ತಂಗಡಿ ಸಂತೆಕಟ್ಟೆ‌ಯಿಂದ ಬಸ್ ನಿಲ್ದಾಣದವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವ್ಯಾಪಾರ ನಿಷೇಧ

Suddi Udaya

ತೋಟತ್ತಾಡಿ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

Suddi Udaya

ಎ.12: ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya
error: Content is protected !!