22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನ ಆಚರಣೆ

ಉಜಿರೆ: ಭಾರತದ ಅತ್ಯಂತ ಕಿರಿಯ ಪ್ರಧಾನಿ ಎನಿಸಿದ ಹಾಗೂ ವಿಜ್ಞಾನ ತಂತ್ರಜ್ಞಾನ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ ದಿ.ರಾಜೀವ್ ಗಾಂಧಿಯವರ ಜನ್ಮ ಜಯಂತಿಯ ಪ್ರಯುಕ್ತ ನಡೆಸಲ್ಪಡುವ ಸದ್ಭಾವನಾ ದಿನಾಚರಣೆಯನ್ನು ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆಯನ್ನು ನೆರವೇರಿಸುವ ಮೂಲಕ ವಿನೂತನವಾಗಿ ಆಚರಿಸಲಾಯಿತು.

ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್. ಬಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ವಿವಿಧತೆಯಲ್ಲಿ ಏಕತೆಯನ್ನು ಸಾರುವುದೇ ಭಾರತದ ಅಸ್ಮಿತೆ. ಸರ್ವ ಧರ್ಮಗಳಲ್ಲಿಯೂ ಸದ್ಭಾವನೆಯನ್ನು ಮೂಡಿಸುವುದರ ಮೂಲಕ ಸಮಾಜದಲ್ಲಿ ನಡೆಯುತ್ತಿರುವ ಸಂಘರ್ಷಗಳನ್ನು ತಡೆಯಬಹುದು. ಶಾಂತಿ ಸೌಹಾರ್ಧತೆಗಳು ಒಂದು ದೇಶದ ಅಭಿವೃದ್ಧಿಗೆ ರಹದಾರಿಯಾಗುತ್ತದೆಯೇ ಹೊರತು ದ್ವೇಷ ಸಂಘರ್ಷಗಳಿಂದ ಸಾಧ್ಯವಿಲ್ಲ ಎಂದರು.

ವಿದ್ಯಾರ್ಥಿಗಳಾದ ಧರೇಶ್ ಹಿಂದೂ ಧರ್ಮದ ,ಅಫೀಫಾ ಇಸ್ಲಾಂ ಧರ್ಮದ,ನಿಜಾ ಕ್ರೈಸ್ತ ಧರ್ಮದ, ಪವಿತ್ರಾ ಜೈನ್, ಜೈನ ಧರ್ಮದ ಮತ್ತು ಲಿಖಿತಾ ಬೌದ್ಧ ಧರ್ಮದ ಪ್ರಾರ್ಥನೆ ಹಾಗೂ ಸಂದೇಶವನ್ನು ಸಾರಿದರು. ಮಹಾತ್ಮಾ ಗಾಂಧಿಯವರ ಪ್ರಿಯ ಭಜನೆ ರಘುಪತಿ ರಾಘವ ರಾಜಾರಾಮ್ ಅನ್ನು ವಿದ್ಯಾರ್ಥಿಗಳು ಸಾಮೂಹಿಕವಾಗಿ ಹಾಡಿದರು.

ವಿದ್ಯಾರ್ಥಿ ಪ್ರಣವ್ ಕೃಷ್ಣ ಭಟ್ ಸ್ವಾಗತಿಸಿ, ನಿರ್ವಹಿಸಿದರು ಶ್ರೀಲಕ್ಷ್ಮಿ ವಂದಿಸಿದರು. ಕಾಲೇಜಿನ ಕಲಾ ವಿಭಾಗದ ಸಂಘ ವ್ಯುತ್ಪತ್ತಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ದಿವ್ಯಾ ಕುಮಾರಿ, ಶ್ಯಾಮಿಲ ಹಾಗೂ ಡಾ. ಸಾಜಿದ ಉಪಸ್ಥಿತರಿದ್ದು ಸಹಕರಿಸಿದರು.

Related posts

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ವೇಣೂರು ಸೊಸೈಟಿಯ ಮಾಜಿ ನಿರ್ದೇಶಕ ರಾಜೇಂದ್ರ ರಾವ್ ನಿಧನ

Suddi Udaya

ಕೆದ್ದುನಲ್ಲಿ ಕಾರು ಡಿಕ್ಕಿ:ಬೈಕ್ ಸವಾರಿಬ್ಬರಿಗೆ ಗಾಯ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಕುಕ್ಕೇಡಿ ಗ್ರಾ.ಪಂ. ನ ಮೊದಲನೇ ಹಂತದ ಗ್ರಾಮ ಸಭೆ

Suddi Udaya

ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

Suddi Udaya
error: Content is protected !!