23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಡಾ. ಹೆಗ್ಗಡೆಯವರ ಬಗ್ಗೆ ಅಪಪ್ರಚಾರಕ್ಕೆ ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳಿಂದ ಖಂಡನೆ; ಹೆಗ್ಗಡೆಯವರ ಮತ್ತು ಅವರ ಕುಟುಂಬವರ್ಗದವರ ಬಗ್ಗೆಅವಮಾನಕರ ಮಾತುಗಳನ್ನಾಡುವವರ ಅನಪೇಕ್ಷಿತ‌ ಚಟುವಟಿಕೆಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ; ಉಜಿರೆಯ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗಳಕಾರ್ಯದರ್ಶಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಎಸ್‌ಡಿಎಂ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಪತ್ರಿಕಾ ಹೇಳಿಕೆ ಬಿಡುಗಡೆ

ಬೆಳ್ತಂಗಡಿ: ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳಲ್ಲಿ ಬಹುಸಂಖ್ಯೆಯ ಮಹಿಳಾ ಅಧ್ಯಾಪಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿನಿಯರೂ ಇದ್ದುನಮಗೆ ಯಾರಿಗೂ ಕ್ಷೇತ್ರದಿಂದಾಗಲೀ, ಕ್ಷೇತ್ರದ ಆಡಳಿತ ವರ್ಗದಿಂದಾಗಲೀ ಯಾವುದೇ ರೀತಿಯ ತೊಂದರೆ ಆಗಿಲ್ಲ. ನಮ್ಮೆಲ್ಲರ ಶ್ರೇಯೋಭಿವೃದ್ಧಿಯನ್ನೇ ಬಯಸುವ ಪೂಜ್ಯಹೆಗ್ಗಡೆಯವರ ಮತ್ತು ಅವರ ಕುಟುಂಬವರ್ಗದವರ ಬಗ್ಗೆಅವಮಾನಕರ ಮಾತುಗಳನ್ನಾಡುವವರ ಅನಪೇಕ್ಷಿತ‌ ಚಟುವಟಿಕೆಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ. ಜಾತಿಮತ ದೇಶ ಭಾಷೆಗಳ ತಾರತಮ್ಯವಿಲ್ಲದೆ ಸರ್ವರನ್ನೂ ಸಮಾನ ಪ್ರೀತಿಯಿಂದ ಕಾಣುವ ಮಾನವತಾವಾದಿ, ನಮ್ಮ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಬಗ್ಗೆ ಸುಳ್ಳು ಆರೋಪಗಳನ್ನು ನಾವು ಖಡಾ ಖಂಡಿತವಾಗಿ ತಿರಸ್ಕರಿಸುತ್ತೇವೆ ಎಂದು ಉಜಿರೆಯ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗಳಕಾರ್ಯದರ್ಶಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ(ಐಟಿ ಮತ್ತು ಹಾಸ್ಟೆಲ್), ಎಸ್‌ಡಿಎಂ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಸುಮಾರು 8೦೦ ವಷಗಳ ಪ್ರಾಚೀನ ಇತಿಹಾಸವಿರುವ ಪುಣ್ಯ ಕ್ಷೇತ್ರನಮ್ಮ ಧರ್ಮಸ್ಥಳ. ಪರಂಪರೆಯಿಂದ ಬಂದ ‘ಚತುರ್ವಿಧ ದಾನ’ಗಳು ಮತ್ತು ನಾಡು ನುಡಿ ಸಾಹಿತ್ಯ ಕಲೆ ಸಂಸ್ಕೃತಿಗಳಪೋಷಣೆ ಮತ್ತು ಸಂರಕ್ಷಣೆಗೆ ಹಾಗೂ ಸಾಮಾಜಿಕ ಅಭಿವೃದ್ಧಿಮತ್ತು ಪರಿಸರ ಸಂವರ್ಧನೆಗೆ ಶ್ರೀ ಕ್ಷೇತ್ರವು ಕೊಡುತ್ತಿರುವ ಕೊಡುಗೆ ಮೌಲಿಕವಾದುದು. ಆರೋಗ್ಯ, ವಿದ್ಯೆ ಮತ್ತು ಉದ್ಯೋಗ ವಲಯದಲ್ಲೂ ಜನಪರ ಕಾಳಜಿಯಿಂದ ಉನ್ನತ ಸಾಧನೆ ಮಾಡಿರುವ ಧರ್ಮಸ್ಥಳ ಇಂದು ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿಯ, ಸಮಾಜಮುಖೀ ಅಭಿವೃದ್ಧಿಯೋಜನೆಗಳಿಂದ ರಾಷ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿಗಮನ ಸೆಳೆದಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ವಿದ್ಯಾದಾನಕ್ಕೆ ಸಂಬಂಧಿಸಿದಂತೆ ಡಿ. ವೀರೇಂದ್ರ ಹೆಗ್ಗಡೆಯವರ ಸಮರ್ಥ ನಾಯಕತ್ವದಲ್ಲಿ ಪ್ರಸ್ತುತ ಎಲ್‌ಕೆಜಿಯಿಂದ ಪಿಜಿಯವರೆಗೆ ವಿವಿಧ ವಿಷಯಗಳ ೫೬ ಶಿಕ್ಷಣ ಸಂಸ್ಥೆಗಳು Adding Value in to Education ಎಂಬ ಉತ್ಕೃಷ ಧೈಯದೊಂದಿಗೆ ಉಜಿರೆ, ಮಂಗಳೂರು, ಉಡುಪಿ, ಸಂಸೆ, ಹಾಸನ, ಬೆಂಗಳೂರು, ಮೈಸೂರು ಮತ್ತು ಧಾರವಾಡಗಳಲ್ಲಿ ಪ್ರಾಥಮಿಕ, ಪ್ರೌಢ, ಪಿಯುಸಿ ಮತ್ತು ಪದವಿ, ಐಟಿಐ, ಡಿಪ್ಲೊಮಾ, ಕಾನೂನು, ವೈದ್ಯಕೀಯ, ದಂತವೈದ್ಯಕೀಯ, ಇಂಜಿನಿಯರಿಂಗ್, ಎಂಬಿಎ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ, ಆಯುರ್ವೇದ ಮೊದಲಾದ ಕೋರ್ಸುಗಳ ಮೂಲಕ ಗುಣ ಮಟ್ಟದ ಶಿಕ್ಷಣ ನೀಡುತ್ತಿವೆ. ೨೦೧೯ರಲ್ಲಿ ಧಾರವಾಡದಲ್ಲಿ ಎಸ್‌ಡಿಎಂ ಯೂನಿವರ್ಸಿಟಿಯೂ ಆರಂಭವಾಗಿದ್ದು, ಅತೀ ಕಡಿಮೆ ಅವಧಿಯಲ್ಲಿ ದೇಶದ ಅಗ್ರ ಉದಯೋನ್ಮುಖ ವಿಶ್ವವಿದ್ಯಾಲಯವಾಗಿ ಹೊರಹೊಮ್ಮಿದ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ. ಉನ್ನತ ಶಿಕ್ಷಣದ ಕೆಲವು ಸಂಸ್ಥೆಗಳು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ (ಯುಜಿಸಿ) ರಾಷ್ಟ್ರೀಯ ಮೌಲ್ಯಾಂಕನ ಸಂಸ್ಥೆ (ನ್ಯಾಕ್)ಯಿಂದ ಉನ್ನತ ಗ್ರೇಡಿಂಗ್‌ಗಳನ್ನು ಪಡೆದಿವೆ.

ಪ್ರಸ್ತುತ ಎಲ್ಲ ಎಸ್‌ಡಿಎಂ ವಿದ್ಯಾಸಂಸ್ಥೆಗಳಲ್ಲಿ ಸುಮಾರು ೩೦ ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುಡುತ್ತಿದ್ದು, ಸುಮಾರು ೮ ಸಾವಿರ ಉದ್ಯೋಗಿಗಳು ಸೇವೆಯಲ್ಲಿ ನಿರತರಾಗಿದ್ದಾರೆ.ಒಟ್ಟಿನಲ್ಲಿ, ಕೈಗೆಟಕುವ ದರದಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡಬೇಕು ಎಂಬ ಉನ್ನತ ಧೈಯದೊಂದಿಗೆ ಡಿ. ವೀರೇಂದ್ರ ಹೆಗ್ಗಡೆಯವರು ಆರಂಭಿಸಿರುವ ಶಿಕ್ಷಣ ಸಂಸ್ಥೆಗಳಲ್ಲಿ ನಾಡಿನ, ಹೊರನಾಡಿನ ಮತ್ತು ವಿದೇಶಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರು ಯಾವುದೇ ಆತಂಕವಿಲ್ಲದೆ ವ್ಯಾಸಂಗ ಮಾಡುತ್ತಿದ್ದಾರೆ. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಸಾವಿರಾರು ಹಿರಿಯ ವಿದ್ಯಾರ್ಥಿಗಳು ಇಂದು ದೇಶ ವಿದೇಶಗಳಲ್ಲಿ ಉನ್ನತ ಸ್ಥಾನಮಾನದ ಉದ್ಯೋಗದಲ್ಲಿದ್ದಾರೆ. ಇಷ್ಟೇ ಅಲ್ಲದೇ ಸರ್ಕಾರೀ ಮತ್ತು ಅನುದಾನಿತ ಶಾಲೆಗಳಿಗೆ ಪ್ರತಿವಷ ಕಲಿಕೋಪಕರಣಗಳು ಮತ್ತು ಸಾವಿರಾರು ಶಿಕ್ಷಕರನ್ನು ನಿಯೋಜಿಸಿ ಬಡ ವಿದ್ಯಾರ್ಥಿಗಳ ಕಲಿಕೆಗೆ ದೊಡ್ಡ ಕೊಡುಗೆಯನ್ನು ನೀಡಲಾಗುತ್ತಿದೆ. ಜೊತೆಗೆ ಅರ್ಹ ವಿದ್ಯಾರ್ಥಿಗಳಿಗೆ ಪ್ರತಿವಷ ಕೋಟ್ಯಂತರ ರೂಪಾಯಿ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ.

ಹೀಗೆ ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅನನ್ಯ ಕೊಡುಗೆ ನೀಡುತ್ತಲೇ ಧರ್ಮಸ್ಥಳ ಮಾದರಿಯನ್ನು ಜಗತ್ತಿಗೇ ಪರಿಚಯಿಸಿದ ಕ್ಷೇತ್ರ ಧರ್ಮಸ್ಥಳ. ಈ ಎಲ್ಲ ಹಿನ್ನೆಲೆಯಿರುವ ಪವಿತ್ರ ಕ್ಷೇತ್ರ ಧರ್ಮಸ್ಥಳದ ಬಗ್ಗೆ, ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಬಗ್ಗೆ ಕೆಲವು ಸ್ಥಾಪಿತ ಹಿತಾಸಕ್ತಿಯ ವಿರೋಧಿಗಳು ಷಡ್ಯಂತ್ರ ರೂಪಿಸಿ ಹಲವು ವರ್ಷಗಳಿಂದ ನಿರಂತರ ಅಪಪ್ರಚಾರ ಮತ್ತು ಅವಮಾನ ಮಾಡುತ್ತಿರುವುದು, ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ, ಸತ್ಯಕ್ಕೆ ದೂರವಾದ ಹೇಳಿಕೆಗಳನ್ನು ನೀಡುತ್ತಿರುವುದು ನಮಗೆ ತೀವ್ರ ನೋವನ್ನುಂಟು ಮಾಡಿದೆ ಎಂದು ಸಿಬ್ಬಂದಿ ವರ್ಗ ಬೇಸರ ವ್ಯಕ್ತಪಡಿಸಿದೆ.

Related posts

ಪದ್ಮುಂಜ ಹಾ.ಉ.ಸ‌. ಸಂಘದ ಮಾಜಿ ನಿರ್ದೇಶಕ ಪೂವನಿ ಗೌಡ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಬ್ರಹ್ಮವಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರು

Suddi Udaya

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ: ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Suddi Udaya

ಉಜಿರೆ : ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ‍್ಯಕ್ರಮ

Suddi Udaya

ನಾಳೆ(ಜು.6): ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ : ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ದಿತಿ ಸಾಂತ್ವನ ನಿಧಿ ವಿತರಣೆ

Suddi Udaya

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!