ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಮತ್ತು ಕುತ್ಲೂರು ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತಾಭಿಮಾನಿಗಳಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ

ಬೆಳ್ತಂಗಡಿ: ನಾಡಿನ ಕೋಟ್ಯಂತರ ಭಕ್ತರ ನಂಬಿಕೆ ,ಶ್ರದ್ದೆಗಳ ಮತ್ತು ಧಾರ್ಮಿಕ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಯವರ ವಿರುದ್ಧ ಕೆಲ ಸಮಾಜ ವಿರೋಧಿ ವ್ಯಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ, ನಿಂದನೆ, ಪ್ರಚೋದನಾತ್ಮಕ, ಅವಮಾನಕರ ಮತ್ತು ಅಸಹ್ಯಕರ ಹೇಳಿಕೆಗಳನ್ನು ನೀಡುವುದರ ಮೂಲಕ ಸಮಾಜದಲ್ಲಿ ಅಶಾಂತಿಯನ್ನು ಭಯದ ವಾತಾವರಣವನ್ನು ಸೃಷ್ಟಿಸಿ ಸಾಮಾಜಿಕ ಸ್ವಾಸ್ತ್ಯವನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ.

ಇದರಿಂದ ಸಮಾಜದ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ಕೋಟ್ಯಂತರ ಭಕ್ತರ ಶ್ರದ್ದೆ ಮತ್ತು ನಂಬಿಕೆಗಳಿಗೆ ತೀವ್ರ ಘಾಸಿಯನ್ನು0ಟು ಮಾಡಿದೆ. ಸಮಾಜದಲ್ಲಿ ಶಾಂತಿ, ನೆಮ್ಮದಿ, ಸಾಮರಸ್ಯಯನ್ನು ಕಾಪಾಡುವ ನಿಟ್ಟಿನಲ್ಲಿ ಇಂತಹ ಕೃತ್ಯಗಳನ್ನು ಮಾಡುವ ದುಷ್ಟ ಶಕ್ತಿಗಳನ್ನು ಧಮನಿಸುವ ಸಲುವಾಗಿ ಈ ಪ್ರಕರಣದ ಹಿಂದಿರುವ ಎಲ್ಲಾ ಸಮಾಜ ವಿರೋಧಿ ವ್ಯಕ್ತಿಗಳ, ಗುಂಪುಗಳ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಎಂಬ ಬೇಡಿಕೆಯೊಂದಿಗೆ ನಾರಾವಿ ಮತ್ತು ಕುತ್ಲೂರು ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತಾಭಿಮಾನಿಗಳಿಂದ ಮಂಗಳೂರು ಜಿಲ್ಲಾಧಿಕಾರಿಯವರಿಗೆ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿಯನ್ನು ಸಲ್ಲಿಸಲಾಯಿತು.

Related posts

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

Suddi Udaya

ಕಾರಿಂಜ ವನಶಾಸ್ತಾರ, ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ಚಪ್ಪರ ಮೂಹೂರ್ತ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Suddi Udaya

ಉಡುಪಿ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಂದ ಅರ್ಚಕ ಕೆ.ರಮಾನಂದ ಭಟ್ ಕೊಕ್ಕಡ ಅವರಿಗೆ “ಶ್ರೀಕೃಷ್ಣಗೀತಾನುಗ್ರಹ” ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ : ಕಾರು ಬೈಕ್ ನಡುವೆ ಅಪಘಾತ

Suddi Udaya
error: Content is protected !!