September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರು ಸೇರಿ ಮೃತದೇಹ ಹೂತು ಹಾಕಿರುವ ಆರೋಪ ಪ್ರಕರಣ : ಭಾಸ್ಕರ್ ನಾಯ್ಕ್ ರವರಿಂದ ಎಸ್.ಐ.ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ : ಉಜಿರೆಯಲ್ಲಿ ಕೆಲವು ವ್ಯಕ್ತಿಗಳು ಸೇರಿಕೊಂಡು ಮೃತದೇಹವೊಂದನ್ನು ಹೂತು ಹಾಕಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದರೂ ಸಮರ್ಪಕವಾಗಿ ತನಿಖೆ ನಡೆದಿಲ್ಲ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಉಜಿರೆ ನಿವಾಸಿ ಭಾಸ್ಕರ್ ನಾಯ್ಕ್ ಬಡೆಕೊಟ್ಟು ಎಂಬವರು ಎಸ್.ಐ.ಟಿ ಕಚೇರಿಗೆ ಆ.20 ರಂದು ದೂರು ನೀಡಿದ್ದಾರೆ.

ಎಸ್.ಐ.ಟಿ ಅಧಿಕಾರಿಗಳು ದೂರು ಸ್ವೀಕರಿಸಿದ್ದು ದೂರಿನ ಬಗ್ಗೆ ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದು ಯಾವುದೇ ಅಪರಾಧ ಕೃತ್ಯದ ಕುರಿತು ಮಾಹಿತಿ ದೂರನ್ನು ಸ್ಥಳೀಯ ಪೊಲೀಸ್ ಠಾಣೆಗೆ ಮುಂದಿನ ಕ್ರಮ ಜರುಗಿಸುವ ಕುರಿತು ಸಲ್ಲಿಸುವಂತೆ ಹಿಂಬರಹ ನೀಡಿದ್ದಾರೆ.

ಉಜಿರೆ ಗ್ರಾಮದ ನಿವಾಸಿಯಾಗಿರುವ ಸೋಂಪ ಯಾನೆ ಬಾಲಕೃಷ್ಣ ಶೆಟ್ಟಿ ಎಂಬವರು ಕಾಣೆಯಾಗಿದ್ದು ಈ ಬಗ್ಗೆ 18/12/2018 ರಂದು ದೂರನ್ನು ನೀಡಲಾಗಿತ್ತು. ಇದೆ ಸಂದರ್ಭದಲ್ಲಿ ಉಜಿರೆ ಬಿಲ್ಲರೋಡಿ ಎಂಬಲ್ಲಿ ಸರಕಾರಿ ಸ್ಥಳದಲ್ಲಿ ಮರ ಕಡಿಯುವ ವೇಳೆ ಮೃತದೇಹವೊಂದು ಕಂಡು ಬಂದಿರುವುದಾಗಿ ತಿಳಿದು ಬಂದಿದ್ದು ಆ ಮೃತದೇಹವನ್ನು ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರು ಸೇರಿ ಜೆಸಿಬಿ ಮೂಲಕ ಮುಚ್ಚಿಹಾಕಿದ್ದಾರೆ ಎಂಬ ವದಂತಿಯು ಹರಿದಾಡುತ್ತಿದೆ.

ಈ ಬಗ್ಗೆ ನಾಪತ್ತೆಯಾದ ವ್ಯಕ್ತಿಯ ಮನೆಯವರಲ್ಲಿ ದೂರು ನೀಡಲು ಹೇಳಿದರೂ ಅವರು ದೂರು ನೀಡಿಲ್ಲ. ಇದಾದ ಬಳಿಕ ತಾನು ಬೆಳ್ತಂಗಡಿ ಪೊಲೀಸರಿಗೆ 8/12/2018ರಂದು ದೂರು ನೀಡಿದ್ದೆ ಸಂಶಯವಿರುವ ವ್ಯಕ್ತಿಗಳ ಹೆಸರುಗಳನ್ನು ನೀಡಿದ್ದೆ ಈ ಬಗ್ಗೆ ಪ್ರಕರಣ ದಾಖಲಿಸಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೆ ಒತ್ತಡಕ್ಕೆ ಮಣಿದು ಸಮರ್ಪಕವಾಗಿ ತನಿಖೆಯನ್ನು ನಡೆಸಿಲ್ಲ. ನಾಪತ್ತೆಯಾದ ವ್ಯಕ್ತಿ ಅಂದಿನಿಂದ ಇಂದಿನ ವರೆಗೂ ಹಿಂತಿರುಗಿ ಬಂದಿಲ್ಲ. ಈ ಹಿನ್ನಲೆಯಲ್ಲಿ ಸೋಂಪ ಯಾನೆ ಬಾಲಕೃಷ್ಣ ಶೆಟ್ಟಿಯ ಮೃತದೇಹವನ್ನು ಕಾನೂನು ಬಾಹಿರವಾಗಿ ಸರಕಾರಿ ಜಾಗದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗು ಇತರರು ಹೂತು ಹಾಕಿರುವುದಾಗಿ ಅನುಮಾನವಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಎಸ್.ಐ.ಟಿ ಅಧಿಕಾರಿಗಳು ದೂರನ್ನು ಸ್ವೀಕರಿಸಿದ್ದಾರೆ.

Related posts

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya

ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ

Suddi Udaya

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

Suddi Udaya

ಕಾರ್ಗಿಲ್ ವಿಜಯ ದಿನ: ಉಜಿರೆ ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕದಿಂದ ಕಾರ್ಗಿಲ್ ವನಕ್ಕೆ ಭೇಟಿ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya

ಉಜಿರೆ: ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಸೈಂಧವ ವಧೆ ತಾಳಮದ್ದಳೆ

Suddi Udaya
error: Content is protected !!