September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಶಕ್ಕೆ ಪಡೆಯಲಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಂಧನ

ಬೆಳ್ತಂಗಡಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಮಾತನಾಡಿದ ಆರೋಪದಲ್ಲಿ ವಶಕ್ಕೆ ಪಡೆದಿದ್ದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ.

ಕಾನೂನು ಸುವ್ಯವಸ್ಥೆಗೆ ಅಡ್ಡಿಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬ್ರಹ್ಮಾವರ ಠಾಣೆ ಪರಿಸರದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಬಂದೋಬಸ್ತ್ ಬಿಗಿಗೊಳಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಬಿ.ಎಲ್‌. ಸಂತೋಷ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ವಿಡಿಯೋ ಹರಿದಾಡಿದ್ದು, ಇದರ ಬೆನ್ನಿಗೇ ವ್ಯಕ್ತಿಯೋರ್ವರು ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದರು. ವಿಚಾರಣೆಗೆ ಹಾಜರಾಗುವಂತೆ ಬ್ರಹ್ಮಾವರ ಪೊಲೀಸರು ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇಂದು ಬೆಳ್ತಂಗಡಿ ತಾಲೂಕು ಉಜಿರೆಯ ಮಹೇಶ್ ಶೆಟ್ಟಿ ನಿವಾಸಕ್ಕೆ ಆಗಮಿಸಿದ್ದ ಪೊಲೀಸರು ಅವರನ್ನು ವಶಕ್ಕೆ ಪಡೆದು ಬ್ರಹ್ಮಾವರಕ್ಕೆ ಕರೆದೊಯ್ದಿದ್ದು, ಕೆಲಕಾಲ ವಿಚಾರಣೆ ನಡೆಸಿದ ಬಳಿಕ ಅವರನ್ನು ಬಂಧಿಸಲಾಗಿದೆ.

Related posts

ಸಾಮರಸ್ಯ ಸಾರಿದ ಮಂಗಳೂರು ದಸರಾ ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಹರ್ಷ

Suddi Udaya

ಸುದೆಮುಗೇರು ವೃದ್ಧಾಶ್ರಮದಲ್ಲಿ. ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ವೇಣೂರು ಯುವ ಸೇವಾ ಸಂಗಮ ಟ್ರಸ್ಟ್ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ.1 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ನೆರಿಯ ಸುಂದರ ಮಲೆಕುಡಿಯ ಅವರ ಕೊಲೆ ಯತ್ನ ಪ್ರಕರಣ: ನ್ಯಾಯಾಲಯದ ತೀರ್ಪು ಸ್ವಾಗತಾರ್ಹ; ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ತಾಲೂಕು ಘಟಕ

Suddi Udaya
error: Content is protected !!