25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedವರದಿ

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಕನ್ಯಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ದೇಣಿಗೆ

ಕನ್ಯಾಡಿ: ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವದಂದು ಕನ್ಯಾಡಿ-II ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯವರಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ.೩೩,೩೩೩/- ದೇಣಿಗೆಯನ್ನು ನೀಡಿ ಕಟ್ಟಡದ ನಿರ್ಮಾಣ ಶೀಘ್ರವಾಗಿ ನೆರವೇರುವಂತೆ ಶುಭಹಾರೈಸಿದರು.

ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕ ರಾವ್ ರವರು ಸಂಸ್ಥೆಯ ಪರವಾಗಿ ದೇಣಿಗೆಯನ್ನು ಸ್ವೀಕರಿಸಿ ಧನ್ಯವಾದವಿತ್ತರು. ಇದೇ ಸಂದರ್ಭದಲ್ಲಿ ಅನಾರೋಗ್ಯದಿಂದಿರುವ ಸಂಘಟನಾ ಕಾರ್ಯದರ್ಶಿ ಹಾಗೂ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಕೇಶವ ಎಂ. ರವರಿಗೆ ರೂ.೧೦ ಸಾವಿರ ಚೆಕ್‌ನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಅಧ್ಯಕ್ಷ ಪ್ರಭಾಕರ್ ಗೌಡ ಬೊಳ್ಮ, ಉಪಾಧ್ಯಕ್ಷ ಯತೀಶ್ ಸುವರ್ಣ, ಸಂಯೋಜಕ ರಾಜೇಂದ್ರ ಅಜ್ರಿ, ಉದ್ಘಾಟಕ ದೇವದಾಸ ಎಲ್. ಶೆಟ್ಟಿ ಬದ್ಯಾರು, ಸೌತಡ್ಕ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕ ಸತ್ಯಪ್ರಿಯ ಕಲ್ಲೂರಾಯ, ಧರ್ಮಸ್ಥಳ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ವಿಮಲಾ ಪರಮೇಶ್ವರ, ಶಿವ ಪಾರ್ವತಿ ಕಲ್ಯಾಣ ಮಂಟಪ ಮಾಲಕ ಗಿರೀಶ್ ಕುದ್ರೆಂತ್ತಾಯ, ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷ ದೇವಸ್ಯ ಟಿ, ಬೃಂದಾವನ ಮನೆ ಕನ್ಯಾಡಿ II ಶ್ರೀಮತಿ ಪವಿತ್ರ ಸುಕುಮಾರ ಶೆಟ್ಟಿ, ಧರ್ಮಸ್ಥಳ ಗ್ರಾ.ಪಂ. ಸದಸ್ಯರಾದ ವಸಂತ ನಾಯ್ಕ, ಶ್ರೀಮತಿ ರೇವತಿ, ಕೆ. ನಂದ ಅಧ್ಯಕ್ಷರು ಎಸ್‌ಡಿಎಂಸಿ, ಕನ್ಯಾಡಿ-II ಪ್ರ.ಮು.ಶಿ ಶ್ರೀಮತಿ ಪುಷ್ಪಾ ಎನ್. ಉಪಸ್ಥಿತರಿದ್ದರು.

Related posts

ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ. ರಿಗೆ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪ್ರಶಸ್ತಿ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಎಕ್ಸೆಲ್ ಉದ್ಯೋಗಿಗಳಿಂದ ಅಭಿನಂದನಾ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya

ಗುಂಡೂರಿ: ಸಮೃದ್ದಿ ಗೃಹಪ್ರವೇಶ ಮುಂದೂಡಿಕೆ

Suddi Udaya
error: Content is protected !!