July 23, 2026
Uncategorizedವರದಿ

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಕನ್ಯಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ದೇಣಿಗೆ

ಕನ್ಯಾಡಿ: ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವದಂದು ಕನ್ಯಾಡಿ-II ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯವರಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ.೩೩,೩೩೩/- ದೇಣಿಗೆಯನ್ನು ನೀಡಿ ಕಟ್ಟಡದ ನಿರ್ಮಾಣ ಶೀಘ್ರವಾಗಿ ನೆರವೇರುವಂತೆ ಶುಭಹಾರೈಸಿದರು.

ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕ ರಾವ್ ರವರು ಸಂಸ್ಥೆಯ ಪರವಾಗಿ ದೇಣಿಗೆಯನ್ನು ಸ್ವೀಕರಿಸಿ ಧನ್ಯವಾದವಿತ್ತರು. ಇದೇ ಸಂದರ್ಭದಲ್ಲಿ ಅನಾರೋಗ್ಯದಿಂದಿರುವ ಸಂಘಟನಾ ಕಾರ್ಯದರ್ಶಿ ಹಾಗೂ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಕೇಶವ ಎಂ. ರವರಿಗೆ ರೂ.೧೦ ಸಾವಿರ ಚೆಕ್‌ನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಅಧ್ಯಕ್ಷ ಪ್ರಭಾಕರ್ ಗೌಡ ಬೊಳ್ಮ, ಉಪಾಧ್ಯಕ್ಷ ಯತೀಶ್ ಸುವರ್ಣ, ಸಂಯೋಜಕ ರಾಜೇಂದ್ರ ಅಜ್ರಿ, ಉದ್ಘಾಟಕ ದೇವದಾಸ ಎಲ್. ಶೆಟ್ಟಿ ಬದ್ಯಾರು, ಸೌತಡ್ಕ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕ ಸತ್ಯಪ್ರಿಯ ಕಲ್ಲೂರಾಯ, ಧರ್ಮಸ್ಥಳ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ವಿಮಲಾ ಪರಮೇಶ್ವರ, ಶಿವ ಪಾರ್ವತಿ ಕಲ್ಯಾಣ ಮಂಟಪ ಮಾಲಕ ಗಿರೀಶ್ ಕುದ್ರೆಂತ್ತಾಯ, ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷ ದೇವಸ್ಯ ಟಿ, ಬೃಂದಾವನ ಮನೆ ಕನ್ಯಾಡಿ II ಶ್ರೀಮತಿ ಪವಿತ್ರ ಸುಕುಮಾರ ಶೆಟ್ಟಿ, ಧರ್ಮಸ್ಥಳ ಗ್ರಾ.ಪಂ. ಸದಸ್ಯರಾದ ವಸಂತ ನಾಯ್ಕ, ಶ್ರೀಮತಿ ರೇವತಿ, ಕೆ. ನಂದ ಅಧ್ಯಕ್ಷರು ಎಸ್‌ಡಿಎಂಸಿ, ಕನ್ಯಾಡಿ-II ಪ್ರ.ಮು.ಶಿ ಶ್ರೀಮತಿ ಪುಷ್ಪಾ ಎನ್. ಉಪಸ್ಥಿತರಿದ್ದರು.

Related posts

ಪ್ರೇರಣಾ ಹೆಗ್ಗಡೆ ವಾಹಿನಿ ಅಸ್ತಿತ್ವಕ್ಕೆ

Suddi Udaya

ಕೊಕ್ಕಡ: ಕೆಎಸ್ಆರ್‌ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ: ಮಹಿಳೆಗೆ ಗಾಯ

Suddi Udaya

ಶಿಶಿಲ: ಗಿರಿಜನ ಬಂಧುಗಳಿಗೆ ಕಿರಣ್ ಚಂದ್ರ ಪುಷ್ಪಗಿರಿಯಿಂದ ಬೆಡ್ ಶೀಟ್ ವಿತರಣೆ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಫೆ.17-26: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ

Suddi Udaya

ಕೊಯ್ಯೂರು: ‘ಭೀಮ್ ರಮಾ’ ಬಳಗದಿಂದ ಶಾಲೆಗಳಿಗೆ ‘ಸಂವಿಧಾನ ಪೀಠಿಕೆ’ ಹಸ್ತಾಂತರ

Suddi Udaya
error: Content is protected !!