23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

ಉಜಿರೆ: ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಡುಪಿ ಪೋಲೀಸರು ಇಂದು ಬೆಳಿಗ್ಗೆ ವಶಕ್ಕೆ ಪಡೆದಿದ್ದಾರೆ.

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು
ಬ್ರಹ್ಮವಾರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧ ಆ.21
ರಂದು ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದುಕೊಂಡು ತೆರಳಿದ್ದಾರೆ.

ಆ.21 ರಂದು ಉಡುಪಿ ಜಿಲ್ಲಾ ಎಡಿಷನ್ ಎಸ್ಪಿ ಸುಧಾಕರ್ ಹೆಗ್ಡೆ ನೇತೃತ್ವದಲ್ಲಿ ಪೊಲೀಸ್ ವಾಹನದಲ್ಲಿ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಆಗಮಿಸಿದ್ದಾರೆ. ಈ ಮಧ್ಯೆ ವಾದ- ವಿವಾದಗಳು ನಡೆದು ತಿಮರೋಡಿಯವರನ್ನು ವಶಕ್ಕೆ ಪಡೆಯಲಾಗಿದೆ.
ಆ.16 ರಂದು ಸಾಮಾಜಿಕ ಜಾಲ ತಾಣದಲ್ಲಿ. ಮಹೇಶ ಶೆಟ್ಟಿ ತಿಮರೋಡಿಯವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ, ಮಹೇಶ್ ಶೆಟ್ಟಿ ತಿಮರೋಡಿಯವರ ವಿರುದ್ಧ ಕಾನೂನು ಕ್ರಮಕ್ಕಾಗಿ ರಾಜೀವ ಕುಲಾಲ್, ಉಡುಪಿ ಗ್ರಾಮಾಂತರ ಬಿಜಿಪಿಯ ಮಂದಾಳತ್ವದಲ್ಲಿ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 177/2025 US 196 (1), 352, 353(2) BNS ರಂತೆ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆದು ಕರೆದೊಯ್ದುದ್ದಾರೆ.

Related posts

ಸಂಗೀತ ಜೂನಿಯರ್ ಪರೀಕ್ಷೆ: ಸಾನ್ವಿ ಅಶ್ವಥಪಲ್ಕೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಸಾರ್ವಜನಿಕರಿಗಾಗಿ CPR ಮಾಹಿತಿ ಮತ್ತು ತರಬೇತಿ ಕಾರ್ಯಕ್ರಮ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆ ಶಕ್ತಿ ನಗರದ ಜಂಕ್ಷನ್ ನಲ್ಲಿ ನಾಮಫಲಕ ಅಳವಡಿಕೆ

Suddi Udaya

ಅರಸಿನಮಕ್ಕಿ : ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಅಭಿನಂದನೆ

Suddi Udaya
error: Content is protected !!