23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರು ಸೇರಿ ಮೃತದೇಹ ಹೂತು ಹಾಕಿರುವ ಆರೋಪ ಪ್ರಕರಣ : ಭಾಸ್ಕರ್ ನಾಯ್ಕ್ ರವರಿಂದ ಎಸ್.ಐ.ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ : ಉಜಿರೆಯಲ್ಲಿ ಕೆಲವು ವ್ಯಕ್ತಿಗಳು ಸೇರಿಕೊಂಡು ಮೃತದೇಹವೊಂದನ್ನು ಹೂತು ಹಾಕಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದರೂ ಸಮರ್ಪಕವಾಗಿ ತನಿಖೆ ನಡೆದಿಲ್ಲ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಉಜಿರೆ ನಿವಾಸಿ ಭಾಸ್ಕರ್ ನಾಯ್ಕ್ ಬಡೆಕೊಟ್ಟು ಎಂಬವರು ಎಸ್.ಐ.ಟಿ ಕಚೇರಿಗೆ ಆ.20 ರಂದು ದೂರು ನೀಡಿದ್ದಾರೆ.

ಎಸ್.ಐ.ಟಿ ಅಧಿಕಾರಿಗಳು ದೂರು ಸ್ವೀಕರಿಸಿದ್ದು ದೂರಿನ ಬಗ್ಗೆ ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದು ಯಾವುದೇ ಅಪರಾಧ ಕೃತ್ಯದ ಕುರಿತು ಮಾಹಿತಿ ದೂರನ್ನು ಸ್ಥಳೀಯ ಪೊಲೀಸ್ ಠಾಣೆಗೆ ಮುಂದಿನ ಕ್ರಮ ಜರುಗಿಸುವ ಕುರಿತು ಸಲ್ಲಿಸುವಂತೆ ಹಿಂಬರಹ ನೀಡಿದ್ದಾರೆ.

ಉಜಿರೆ ಗ್ರಾಮದ ನಿವಾಸಿಯಾಗಿರುವ ಸೋಂಪ ಯಾನೆ ಬಾಲಕೃಷ್ಣ ಶೆಟ್ಟಿ ಎಂಬವರು ಕಾಣೆಯಾಗಿದ್ದು ಈ ಬಗ್ಗೆ 18/12/2018 ರಂದು ದೂರನ್ನು ನೀಡಲಾಗಿತ್ತು. ಇದೆ ಸಂದರ್ಭದಲ್ಲಿ ಉಜಿರೆ ಬಿಲ್ಲರೋಡಿ ಎಂಬಲ್ಲಿ ಸರಕಾರಿ ಸ್ಥಳದಲ್ಲಿ ಮರ ಕಡಿಯುವ ವೇಳೆ ಮೃತದೇಹವೊಂದು ಕಂಡು ಬಂದಿರುವುದಾಗಿ ತಿಳಿದು ಬಂದಿದ್ದು ಆ ಮೃತದೇಹವನ್ನು ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರು ಸೇರಿ ಜೆಸಿಬಿ ಮೂಲಕ ಮುಚ್ಚಿಹಾಕಿದ್ದಾರೆ ಎಂಬ ವದಂತಿಯು ಹರಿದಾಡುತ್ತಿದೆ.

ಈ ಬಗ್ಗೆ ನಾಪತ್ತೆಯಾದ ವ್ಯಕ್ತಿಯ ಮನೆಯವರಲ್ಲಿ ದೂರು ನೀಡಲು ಹೇಳಿದರೂ ಅವರು ದೂರು ನೀಡಿಲ್ಲ. ಇದಾದ ಬಳಿಕ ತಾನು ಬೆಳ್ತಂಗಡಿ ಪೊಲೀಸರಿಗೆ 8/12/2018ರಂದು ದೂರು ನೀಡಿದ್ದೆ ಸಂಶಯವಿರುವ ವ್ಯಕ್ತಿಗಳ ಹೆಸರುಗಳನ್ನು ನೀಡಿದ್ದೆ ಈ ಬಗ್ಗೆ ಪ್ರಕರಣ ದಾಖಲಿಸಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೆ ಒತ್ತಡಕ್ಕೆ ಮಣಿದು ಸಮರ್ಪಕವಾಗಿ ತನಿಖೆಯನ್ನು ನಡೆಸಿಲ್ಲ. ನಾಪತ್ತೆಯಾದ ವ್ಯಕ್ತಿ ಅಂದಿನಿಂದ ಇಂದಿನ ವರೆಗೂ ಹಿಂತಿರುಗಿ ಬಂದಿಲ್ಲ. ಈ ಹಿನ್ನಲೆಯಲ್ಲಿ ಸೋಂಪ ಯಾನೆ ಬಾಲಕೃಷ್ಣ ಶೆಟ್ಟಿಯ ಮೃತದೇಹವನ್ನು ಕಾನೂನು ಬಾಹಿರವಾಗಿ ಸರಕಾರಿ ಜಾಗದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗು ಇತರರು ಹೂತು ಹಾಕಿರುವುದಾಗಿ ಅನುಮಾನವಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಎಸ್.ಐ.ಟಿ ಅಧಿಕಾರಿಗಳು ದೂರನ್ನು ಸ್ವೀಕರಿಸಿದ್ದಾರೆ.

Related posts

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

Suddi Udaya

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ

Suddi Udaya

ಮಾ.3: ಚಂದ್ರಗ್ರಹಣ ಪ್ರಯುಕ್ತ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

Suddi Udaya

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

Suddi Udaya

ನಿಡಿಗಲ್ ಬೈಕ್- ಕಾರು ಡಿಕ್ಕಿ; ಸವಾರನಿಗೆ ಗಾಯ

Suddi Udaya

ಜೂನಿಯರ್ ಅಥ್ಲೆಟಿಕ್ಸ್ ರಿಲೇ ರೇಸ್: ಕಲ್ಲೇರಿಯ ಯತಿನ್ ನಾಯ್ಕ್ ರಿಗೆ ಚಿನ್ನದ ಪದಕ

Suddi Udaya
error: Content is protected !!