July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಶಕ್ಕೆ ಪಡೆಯಲಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಂಧನ

ಬೆಳ್ತಂಗಡಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಮಾತನಾಡಿದ ಆರೋಪದಲ್ಲಿ ವಶಕ್ಕೆ ಪಡೆದಿದ್ದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ.

ಕಾನೂನು ಸುವ್ಯವಸ್ಥೆಗೆ ಅಡ್ಡಿಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬ್ರಹ್ಮಾವರ ಠಾಣೆ ಪರಿಸರದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಬಂದೋಬಸ್ತ್ ಬಿಗಿಗೊಳಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಬಿ.ಎಲ್‌. ಸಂತೋಷ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ವಿಡಿಯೋ ಹರಿದಾಡಿದ್ದು, ಇದರ ಬೆನ್ನಿಗೇ ವ್ಯಕ್ತಿಯೋರ್ವರು ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದರು. ವಿಚಾರಣೆಗೆ ಹಾಜರಾಗುವಂತೆ ಬ್ರಹ್ಮಾವರ ಪೊಲೀಸರು ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇಂದು ಬೆಳ್ತಂಗಡಿ ತಾಲೂಕು ಉಜಿರೆಯ ಮಹೇಶ್ ಶೆಟ್ಟಿ ನಿವಾಸಕ್ಕೆ ಆಗಮಿಸಿದ್ದ ಪೊಲೀಸರು ಅವರನ್ನು ವಶಕ್ಕೆ ಪಡೆದು ಬ್ರಹ್ಮಾವರಕ್ಕೆ ಕರೆದೊಯ್ದಿದ್ದು, ಕೆಲಕಾಲ ವಿಚಾರಣೆ ನಡೆಸಿದ ಬಳಿಕ ಅವರನ್ನು ಬಂಧಿಸಲಾಗಿದೆ.

Related posts

ಅ.13: ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಕನ್ಯಾಡಿಯಲ್ಲಿ ಬೃಹತ್ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣೆ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕಿನ 16 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರ್ಕಾರ ಆದೇಶ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಮೊತ್ತ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ, ಇದರ ನೂತನ ಅಧ್ಯಕ್ಷರಾಗಿ ಮಿತ್ತಬಾಗಿಲು ಕಕ್ಕೆನೇಜಿ ಶಿವಾನಂದ ರಾವ್ ಆಯ್ಕೆ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸುರೇಂದ್ರ ಪೈ ನಿಧನ

Suddi Udaya

ಚಾರ್ಮಾಡಿ ಗ್ರಾ.ಪಂ. ಮಟ್ಟದ ಸುಸ್ಥಿರ ಅಭಿವೃದ್ಧಿ ಮತ್ತು ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಕ್ರಮ, ಭಿತ್ತಿಪತ್ರ ಬಿಡುಗಡೆ

Suddi Udaya
error: Content is protected !!