25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಶಕ್ಕೆ ಪಡೆಯಲಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಂಧನ

ಬೆಳ್ತಂಗಡಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಮಾತನಾಡಿದ ಆರೋಪದಲ್ಲಿ ವಶಕ್ಕೆ ಪಡೆದಿದ್ದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ.

ಕಾನೂನು ಸುವ್ಯವಸ್ಥೆಗೆ ಅಡ್ಡಿಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬ್ರಹ್ಮಾವರ ಠಾಣೆ ಪರಿಸರದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಬಂದೋಬಸ್ತ್ ಬಿಗಿಗೊಳಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಬಿ.ಎಲ್‌. ಸಂತೋಷ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ವಿಡಿಯೋ ಹರಿದಾಡಿದ್ದು, ಇದರ ಬೆನ್ನಿಗೇ ವ್ಯಕ್ತಿಯೋರ್ವರು ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದರು. ವಿಚಾರಣೆಗೆ ಹಾಜರಾಗುವಂತೆ ಬ್ರಹ್ಮಾವರ ಪೊಲೀಸರು ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇಂದು ಬೆಳ್ತಂಗಡಿ ತಾಲೂಕು ಉಜಿರೆಯ ಮಹೇಶ್ ಶೆಟ್ಟಿ ನಿವಾಸಕ್ಕೆ ಆಗಮಿಸಿದ್ದ ಪೊಲೀಸರು ಅವರನ್ನು ವಶಕ್ಕೆ ಪಡೆದು ಬ್ರಹ್ಮಾವರಕ್ಕೆ ಕರೆದೊಯ್ದಿದ್ದು, ಕೆಲಕಾಲ ವಿಚಾರಣೆ ನಡೆಸಿದ ಬಳಿಕ ಅವರನ್ನು ಬಂಧಿಸಲಾಗಿದೆ.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya

ಎಸ್‌ಡಿಎಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿನೂತನ ಕಾರ್ಯಕ್ರಮ: 25 ವರ್ಷಗಳ ಹಿಂದೆ ಕಲಿತ ಹಿರಿಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸಮಾವೇಶ

Suddi Udaya

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮುಂಡಾಜೆ: ಯುವವಾಹಿನಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಪರೀಕ್ಷೆಯ ಪೂರ್ವ ತಯಾರಿಕೆಯ ಬಗ್ಗೆ ಕಾರ್ಯಾಗಾರ “ದೀವಿಗೆ “

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ; ಧಾರ್ಮಿಕ ಸಭೆ

Suddi Udaya
error: Content is protected !!