23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

ಚಾರ್ಮಾಡಿ : 2024-25 ನೇ ಸಾಲಿನ ತ್ರಿ ವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಚಾರ್ಮಾಡಿ ಇದರ ಮಹಾಸಭೆಯನ್ನು ಒಕ್ಕೂಟದ ಅಧ್ಯಕ್ಷ ಶ್ರೀಮತಿ ಜಯಂತಿ ಯವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.


ಸಭೆಯಲ್ಲಿ ಹಿಂದಿನ ಮಹಾಸಭೆ ಮತ್ತು ವಾರ್ಷಿಕ ವರದಿಯನ್ನು ಮಂಡಿಸಿ ಅನುಮೋದಿಸಲಾಯಿತು. ಒಕ್ಕೂಟದ 2024-25 ನೇ ಸಾಲಿನ ಲೆಕ್ಕಪರಿಶೋಧನೆ ಮಂಡಿಸಿ ಅನುಮೋದಿಸಲಾಯಿತು ಮುಂದಿನ ವರ್ಷದ ಒಕ್ಕೂಟದ ಆಯವ್ಯಯ ಕ್ರಿಯಾ ಯೋಜನ ವರದಿಯನ್ನು ಮಂಡಿಸಲಾಯಿತು. ಪದಾಧಿಕಾರಿಗಳ ಪದಗ್ರಹಣ ಮಾಡಲಾಯಿತು. ಸಂಜೀವಿನಿ ಯೋಜನೆಗಳ ಸಮಗ್ರ ಮಾಹಿತಿ ಯನ್ನು ನೀಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಸರ್ವ ಪದಾಧಿಕಾರಿಗಳು, ತಾಲೂಕು ಸಂಜೀವಿನಿ ಅಭಿಯಾನ ಘಟಕ ಬೆಳ್ತಂಗಡಿ ಇದರ ವಲಯ ಮೇಲ್ವಿಚಾರಕ ಜಯಾನಂದ , ಸ್ವ ಸಹಾಯ ಸಂಘದ ಪ್ರತಿನಿಧಿಗಳು, ಎಲ್ ಸಿ ಆರ್ ಪಿ, ಪಶು ಸಖಿ ಉಪಸ್ಥಿತರಿದ್ದರು.
ಕೃಷಿ ಸಖಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿ, ಎಮ್ ಬಿ ಕೆ ಭವ್ಯ ಸ್ವಾಗತಿಸಿದರು. ಎಲ್ ಸಿ ಆರ್ ಪಿ ರಮ್ಯಾ ಧನ್ಯವಾದವಿತ್ತರು.

Related posts

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿ: ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

Suddi Udaya

ಬೆಳ್ತಂಗಡಿಯಲ್ಲಿ ಸಿಂಧೂರ ಟ್ರೇಡರ್ಸ್ ಶುಭಾರಂಭ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya
error: Content is protected !!