22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

ಚಾರ್ಮಾಡಿ : 2024-25 ನೇ ಸಾಲಿನ ತ್ರಿ ವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಚಾರ್ಮಾಡಿ ಇದರ ಮಹಾಸಭೆಯನ್ನು ಒಕ್ಕೂಟದ ಅಧ್ಯಕ್ಷ ಶ್ರೀಮತಿ ಜಯಂತಿ ಯವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.


ಸಭೆಯಲ್ಲಿ ಹಿಂದಿನ ಮಹಾಸಭೆ ಮತ್ತು ವಾರ್ಷಿಕ ವರದಿಯನ್ನು ಮಂಡಿಸಿ ಅನುಮೋದಿಸಲಾಯಿತು. ಒಕ್ಕೂಟದ 2024-25 ನೇ ಸಾಲಿನ ಲೆಕ್ಕಪರಿಶೋಧನೆ ಮಂಡಿಸಿ ಅನುಮೋದಿಸಲಾಯಿತು ಮುಂದಿನ ವರ್ಷದ ಒಕ್ಕೂಟದ ಆಯವ್ಯಯ ಕ್ರಿಯಾ ಯೋಜನ ವರದಿಯನ್ನು ಮಂಡಿಸಲಾಯಿತು. ಪದಾಧಿಕಾರಿಗಳ ಪದಗ್ರಹಣ ಮಾಡಲಾಯಿತು. ಸಂಜೀವಿನಿ ಯೋಜನೆಗಳ ಸಮಗ್ರ ಮಾಹಿತಿ ಯನ್ನು ನೀಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಸರ್ವ ಪದಾಧಿಕಾರಿಗಳು, ತಾಲೂಕು ಸಂಜೀವಿನಿ ಅಭಿಯಾನ ಘಟಕ ಬೆಳ್ತಂಗಡಿ ಇದರ ವಲಯ ಮೇಲ್ವಿಚಾರಕ ಜಯಾನಂದ , ಸ್ವ ಸಹಾಯ ಸಂಘದ ಪ್ರತಿನಿಧಿಗಳು, ಎಲ್ ಸಿ ಆರ್ ಪಿ, ಪಶು ಸಖಿ ಉಪಸ್ಥಿತರಿದ್ದರು.
ಕೃಷಿ ಸಖಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿ, ಎಮ್ ಬಿ ಕೆ ಭವ್ಯ ಸ್ವಾಗತಿಸಿದರು. ಎಲ್ ಸಿ ಆರ್ ಪಿ ರಮ್ಯಾ ಧನ್ಯವಾದವಿತ್ತರು.

Related posts

ಮೇಲಂತಬೆಟ್ಟು ಕೊಡ ಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಸ್ಪಂದನಾ ಸೇವಾ ಸಂಘದ ಯೋಜನೆಯಿಂದ ಚಿಕಿತ್ಸಾ ನೆರವು

Suddi Udaya

ಮದ್ರಸ ಪಬ್ಲಿಕ್ ಪರೀಕ್ಷೆ : 5 ನೇ ತರಗತಿ ವಿದ್ಯಾರ್ಥಿನಿ ಫಾತಿಮತ್ ಸನ ಮಡಂತ್ಯಾರು ರಿಗೆ 600 ರಲ್ಲಿ 600 ಅಂಕ

Suddi Udaya

ಕಡಿರುದ್ಯಾವರ : ಶಿರಿಬೈಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಕೊಯ್ಯೂರು: ಹಲವಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೇಸ್ ಸೇರ್ಪಡೆ

Suddi Udaya

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಎಂ.ಎನ್.ಅನುಚೇತ್ ನೇಮಕ

Suddi Udaya
error: Content is protected !!